ಮುಂಬೈ: ರಾಷ್ಟ್ರೀಯ ಉದ್ದೀ ಪನ ಮದ್ದು ತಡೆ ಘಟಕದ ಜೊತೆಗೂಡಿ ಕಾರ್ಯನಿರ್ವಹಿಸಲು ಸಿದ್ಧ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ. ಅಂತರರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕದ ನಿರ್ದೇಶನಗಳಿಗೆ ಸೊಪ್ಪು ಹಾಕಲಾಗದು ಎಂದು ಈ ಹಿಂದೆ ಬಿಸಿಸಿಐ ಹೇಳಿತ್ತು.
ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಅಧ್ಯಕ್ಷರ ಜೊತೆ ಚರ್ಚಿಸಿದ ನಂತರ ಸಭೆ ಸೇರಿದ ಬಿಸಿಸಿಐ ಪದಾಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳ ಸಮಿತಿ ಸದಸ್ಯರು ಈ ನಿರ್ಧಾರ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.