ಹುಬ್ಬಳ್ಳಿ:ಇಲ್ಲಿ ನಡೆಯುತ್ತಿರುವ ಸಿ.ಕೆ. ನಾಯ್ಡು ಟ್ರೋಫಿ 23 ವರ್ಷದ ಒಳಗಿನವರ ಕ್ರಿಕೆಟ್ ಟೂರ್ನಿಯ ಕರ್ನಾಟಕ ಎದುರಿನ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ 273 ರನ್ಗೆ ಆಲೌಟ್ ಆಗಿದೆ.
ಬುಧವಾರದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 244 ರನ್ ಗಳಿಸಿದ್ದ ಮಧ್ಯಪ್ರದೇಶ ಗುರುವಾರದ ಆಟ ಆರಂಭವಾಗಿ ಅರ್ಧ ಗಂಟೆಯಲ್ಲಿ ಉಳಿದ ಮೂರು ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ 95.2 ಓವರ್ ಆಡಿತು.ಮನೋಜ ಭಾಂಡಗೆ ಐದು, ಆದಿತ್ಯ ಸೋಮಣ್ಣ ಎರಡು, ಎಂ.ಬಿ. ದರ್ಶನ್, ಪುನಿತ್ ಮತ್ತು ಎಸ್. ಕಿಶನ್ ತಲಾ ಒಂದು ವಿಕೆಟ್ ಪಡೆದರು.
ಇನಿಂಗ್ಸ್ ಆರಂಭಿಸಿರುವ ಕರ್ನಾಟಕ 6 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.