ಶಿವಮೊಗ್ಗ: ಕೆಎಸ್ಸಿಎ ಕ್ರೀಡಾಂಗಣದಲ್ಲಿ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ನ.29ರಿಂದ ಡಿ.2ರ ವರೆಗೆ 19 ವರ್ಷದೊಳಗಿನ ಬಿಸಿಸಿಐ ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂದು ಕೆಎಸ್ಸಿಎ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್.ಅರುಣ್ ಹೇಳಿದರು.
ಕರ್ನಾಟಕ ಮತ್ತು ಗುಜರಾತ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈಗಾಗಲೇ ಗುಜರಾತ್ ಮತ್ತು ಕರ್ನಾಟಕದ ಆಟಗಾರರು ಶಿವಮೊಗ್ಗಕ್ಕೆ ಬಂದಿದ್ದು, ಅಭ್ಯಾಸದಲ್ಲಿ ತೊಡಗಿದ್ದಾರೆ. ಪಂದ್ಯ ವೀಕ್ಷಣೆಗೆ ಉಚಿತ
ಅವಕಾಶವಿದೆ. ಬೆಳಿಗ್ಗೆ 9.30ರಿಂದ ಸಂಜೆ 4.30ರ ವರೆಗೆ ಪಂದ್ಯ ನಡೆಯಲಿದೆ. 29 ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪಂದ್ಯಕ್ಕೆ ಚಾಲನೆ ನೀಡುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.