ADVERTISEMENT

ಕೋವಿಡ್ ವೈರಸ್‌ ಭೀತಿ; ಎಸಿಸಿ ಸಭೆಗೆ ಗಂಗೂಲಿ ಗೈರು?

ಪಿಟಿಐ
Published 1 ಮಾರ್ಚ್ 2020, 19:47 IST
Last Updated 1 ಮಾರ್ಚ್ 2020, 19:47 IST
   

ಕೋಲ್ಕತ್ತ: ಮಂಗಳವಾರ ದುಬೈನಲ್ಲಿ ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹಾಜರಾಗುತ್ತಿಲ್ಲ.ಕೋವಿಡ್ ವೈರಸ್‌ ಸೋಂಕಿನ ಭೀತಿಯ ಕಾರಣ ಗಂಗೂಲಿ ಈ ನಿರ್ಧಾರ ಕೈಗೊಂಡಿದ್ದಾರೆಂದು ಮಂಡಳಿಯ ಮೂಲಗಳು ತಿಳಿಸಿವೆ.

‘ಯುಎಇಯಲ್ಲಿ ವೈರಸ್ ಸೋಂಕು ಹರಡುವ ಭೀತಿ ಇದೆ ಎನ್ನಲಾಗಿದೆ. ಆದ್ದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ಸಭೆಗೆ ಹಾಜರಾಗುವ ನಿರ್ಧಾರ ಕೈಬಿಟ್ಟಿದ್ದಾರೆ’ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT