ADVERTISEMENT

ಕ್ರಿಕೆಟ್: ಕರ್ನಾಟಕ ತಂಡ ಚುರುಕಿನ ಬೌಲಿಂಗ್

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2019, 7:49 IST
Last Updated 12 ಅಕ್ಟೋಬರ್ 2019, 7:49 IST
   

ಹುಬ್ಬಳ್ಳಿ: ಆರಂಭದಲ್ಲಿ ಚುರುಕಿನ ಬೌಲಿಂಗ್ ಮಾಡಿದ ಕರ್ನಾಟಕ ತಂಡದವರು 16 ವರ್ಷದ ಒಳಗಿನವರ ವಿಜಯ್ ಮರ್ಚಂಟ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.

ಇಲ್ಲಿನ ರಾಜನಗರದ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನದಾಟದ ಭೋಜನ ವಿರಾಮದ ವೇಳೆಗೆ ಹೈದರಾಬಾದ್ 36 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 66 ರನ್ ಗಳಿಸಿದೆ‌.

ಗುರುವಾರ ಜೋರಾಗಿ ಮಳೆ ಬಂದಿದ್ದರಿಂದ ಶುಕ್ರವಾರ ಮೊದಲ ದಿನದಾಟ ನಡೆದಿರಲಿಲ್ಲ. ಆದ್ದರಿಂದ ಶನಿವಾರ ಬೆಳಿಗ್ಗೆ ಟಾಸ್ ನಡೆಯಿತು. ಟಾಸ್ ಗೆದ್ದು ಕರ್ನಾಟಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರ್. ಧನುಷ್ ಗೌಡ ಎರಡು ವಿಕೆಟ್ ಕಬಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.