ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿರುವ ನಗರ ಪೊಲೀಸರು, ₹54 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಸಂದೀಪ ಪಾಟೀಲ ಅವರು ಬೆಟ್ಟಿಂಗ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಮಾಹಿತಿ ನೀಡುವಂತೆ ಕೋರಿದ್ದರು.
ಸಾರ್ವಜನಿಕರ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಪೊಲೀಸರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಮುಖ್ಯ ಬುಕ್ಕಿ ಕರುಣಾಕರ ಹೊರಗಿನಿಂದಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದು, ಆತನ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಸಂದೀಪ ಪಾಟೀಲ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.