ಮುಂಬೈ: ಇಲ್ಲಿಯ ಯುವ ಕ್ರಿಕೆಟ್ ಆಟಗಾರ, ಮುಂಬೈ ರಣಜಿ ತಂಡಕ್ಕೆ ನೆಟ್ಸ್ನಲ್ಲಿ ಬೌಲಿಂಗ್ ಮಾಡಿದ್ದ ಕರಣ್ ತಿವಾರಿ (25) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ವರದಿಯಾಗಿದೆ. ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದಾರೆ.
ಪೂರ್ವ ಗೋರೆಗಾಂವ್ನ ಗೋಕುಲನಗರದಲ್ಲಿರುವ ತಮ್ಮ ನಿವಾಸದಲ್ಲಿ ತಿವಾರಿ ಅವರು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟ್ಯೇಯ್ನ್ ಅವರ ಶೈಲಿಯಲ್ಲಿಯೇ ಕರಣ್ ಕೂಡ ಬೌಲಿಂಗ್ ಮಾಡುತ್ತಿದ್ದರು.
ಈ ಕುರಿತು ಕುರಾರ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.