ADVERTISEMENT

ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಕ್ಕೆ ಕ್ರಿಕೆಟಿಗ ಕೃಣಾಲ್ ಪಾಂಡ್ಯ

ಪಿಟಿಐ
Published 12 ನವೆಂಬರ್ 2020, 16:40 IST
Last Updated 12 ನವೆಂಬರ್ 2020, 16:40 IST
   

ಮುಂಬೈ: ಕ್ರಿಕೆಟಿಗ ಕೃಣಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು(ಡಿಆರ್‌ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದೆ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತು ಕೈವಶವಿರಿಸಿದ್ದಕ್ಕಾಗಿ ಕೃಣಾಲ್‌ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಡಿಆರ್‌ಐ ಮೂಲಗಳು ಹೇಳಿವೆ.

ಯುುಎಐನಲ್ಲಿಐಪಿಎಲ್ ಮುಗಿಸಿ ಗುರುವಾರ ಸಂಜೆ 5 ಗಂಟೆಯ ವಿಮಾನದಲ್ಲಿ ಕೃಣಾಲ್ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ತಕ್ಷಣವೇ ಡಿಆರ್‌ಐ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿ ವಿಚಾರಣೆಗೊಳಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT