ಚೆನ್ನೈ: ಐಪಿಎಲ್ 12ನೇ ಆವೃತ್ತಿಯ ಮೊದಲ ಕ್ರಿಕೆಟ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 70 ರನ್ ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ್ದ ಆರ್ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ವಿರಾಟ್ ಕೊಹ್ಲಿ ಕೇವಲ 6 ರನ್ ಗಳಿಸಿ ಹರ್ಭಜನ್ ಸಿಂಗ್ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ ಹರ್ಭಜನ್ ಸಿಂಗ್ ಮತ್ತು ಇಮ್ರಾನ್ ತಾಹಿರ್ ಸಂಘಟಿತ ದಾಳಿಗೆ ಆರ್ಸಿಬಿ ಬ್ಯಾಟ್ಸ್ಮನ್ಗಳು ಒಬ್ಬರಾದ ಮೇಲೆ ಒಬ್ಬರಂತೆ ಪೆವಿಲಿಯನ್ ಹಾದಿ ಹಿಡಿದರು. ಪಾರ್ಥಿವ್ ಪಟೇಲ್ 29 (35 ಎಸೆತ, ಎರಡು ಬೌಂಡರಿ) ರನ್ ಗಳಿಸಿದ್ದು ಬಿಟ್ಟರೆ ಇನ್ಯಾರೂ ಒಂದಂಕಿ ದಾಟಲಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ಪರ ಹರ್ಭಜನ್ ಸಿಂಗ್ ಮತ್ತು ಇಮ್ರಾನ್ ತಾಹಿರ್ ತಲಾ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 2, ಬ್ರಾವೊ 1 ವಿಕೆಟ್ ಕಬಳಿಸಿದರು.
‘ಮೊದಲ ಪಂದ್ಯ ಆಗಿರುವುದರಿಂದ ಪಿಚ್ ಕುರಿತು ಮತ್ತು ಎಷ್ಟು ಟಾರ್ಗೆಟ್ ನೀಡಬೇಕು ಎನ್ನುವ ಬಗ್ಗೆ ನಿಖರತೆ ಇಲ್ಲ. ಹೀಗಾಗಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದೇವೆ’ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರಸಿಂಗ್ ಧೋನಿ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.