ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಶುಕ್ರವಾರ ತೀವ್ರ ಹೃದಯಾಘಾತದಿಂದ ನವದೆಹಲಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಎದೆನೋವಿನಿಂದ ಬಳಲಿದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಆ್ಯಂಜಿಯೊಪ್ಲಾಸ್ಟಿ ಮಾಡಲಾಗುತ್ತಿದೆ ಎಂದು ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.
'ಕಪಿಲ್ ದೇವ್ ಅವರು ತಮ್ಮ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದ್ದಾರೆ. ಇದು ಪ್ರತಿ ತಿಂಗಳ ಪ್ರಕ್ರಿಯೆಯಷ್ಟೇ' ಎಂದು ಅವರ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ.
1983ರ ವಿಶ್ವಕಪ್ ವಿಜಯೀ ಭಾರತ ತಂಡದ ನಾಯಕರಾಗಿದ್ದವರು ಕಪಿಲ್. ಶ್ರೇಷ್ಠ ಆಲ್ ರೌಂಡರ್ ಗಳಲ್ಲಿ ಪ್ರಮುಖರಾಗಿದ್ದಾರೆ. ಅವರಿಗೆ ಈಗ 61 ವರ್ಷಗಳಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.