ಬೆಂಗಳೂರು: ಭಾರತೀಯ ಕ್ರಿಕೆಟಿಗರ ಸಂಘದ (ಐಸಿಎ) ಸದಸ್ಯರಿಗೆ ಮರಣ ಪರಿಹಾರ ನಿಧಿ ನೀಡುವ ಯೋಜನೆ ಆರಂಭಿಸಲಿದೆ. ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ನೀಡುವ ಯೋಜನೆ ಇದಾಗಿದೆ.
ಮೃತಪಟ್ಟ ಸದಸ್ಯರ ಪತ್ನಿ ಅಥವಾ ಪತಿಗೆ ಬಿಸಿಸಿಐ ಅನುಮೋದನೆಯ ಬಳಿಕ ₹1 ಲಕ್ಷ ಪರಿಹಾರ (ಒಂದು ಸಲದ ನೆರವು) ನೀಡಲಾಗುತ್ತದೆ. ಟೆಸ್ಟ್ ಕ್ರಿಕೆಟ್ ಆಟಗಾರರನ್ನು ಹೊರತುಪಡಿಸಿ ಉಳಿದ ಸದಸ್ಯರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ ಎಂದು ಐಸಿಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆರಂಭಿಕ ಹಂತದಲ್ಲಿ 50 ಮಂದಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದೂ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.