
ಪಂದ್ಯದ ನಡುವೆ ಮಳೆ ಬಂದಿದ್ದರಿಂದ ಮೈದಾನದಿಂದ ಹೊರ ಬರುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಆಟಗಾರರು
ಚಿತ್ರ ಕೃಪೆ: @BCCI
ಬ್ರಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ನಡೆದ ಅಂತಿಮ ಟಿ20 ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ 2–1ರಿಂದ ಸರಣಿ ವಶಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ಶುಭಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ 4.5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ರನ್ ಗಳಿಸಿದ್ದರು.
ಆ ವೇಳೆ ಮೈದಾನದಲ್ಲಿ ಮಳೆ ಆರಂಭಗೊಂಡಿತು. ಮಳೆ ನಿಲ್ಲದ ಹಿನ್ನೆಲೆ ಅಂಪೈರ್ಗಳು ರದ್ದು ಮಾಡಲು ನಿರ್ಧರಿಸಿದರು. ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಅಭಿಷೇಕ್ ಶರ್ಮ ಸರಣಿ ಶ್ರೇಷ್ಠ ಪ್ರಶಸ್ತಿ ಪಡದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.