ಕೆನ್ನಿಂಗ್ಟನ್ ಓವಲ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ ಭಾರತ ತಂಡವು ಆರು ವಿಕೆಟ್ ನಷ್ಟಕ್ಕೆ 329 ರನ್ ಗಳಿಸಿದೆ.
ಇದರೊಂದಿಗೆ 230 ರನ್ಗಳ ಮುನ್ನಡೆ ಗಳಿಸಿದೆ. ಈ ಮೂಲಕ ಪಂದ್ಯವು ರೋಚಕ ಹಂತವನ್ನು ತಲುಪಿದೆ.
ಮೂರು ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದ್ದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ರವೀಂದ್ರ ಜಡೇಜ (17) ಹಾಗೂ ಅಂಜಿಕ್ಯ ರಹಾನೆ (0) ನಿರಾಸೆ ಮೂಡಿಸಿದರು.
ನಾಯಕ ವಿರಾಟ್ ಕೊಹ್ಲಿ 44 ರನ್ ಗಳಿಸಿ ಔಟಾದರು. ಈಗ ಕ್ರೀಸಿನಲ್ಲಿರುವ ರಿಷಭ್ ಪಂತ್ (16*) ಹಾಗೂ ಶಾರ್ದೂಲ್ ಠಾಕೂರ್ (11*) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಭಾರತದ 191 ರನ್ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 290 ರನ್ ಗಳಿಸಿತ್ತು. ಈ ಮೂಲಕ 99 ರನ್ಗಳ ಮುನ್ನಡೆ ಗಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.