ADVERTISEMENT

IND vs ENG: ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ಆಟಗಾರರಿಂದ ಶ್ರದ್ಧಾಂಜಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2025, 10:50 IST
Last Updated 20 ಜೂನ್ 2025, 10:50 IST
<div class="paragraphs"><p>ಕಪ್ಪು ಪಟ್ಟಿ ಧರಿಸಿದ ಆಟಗಾರರು</p></div>

ಕಪ್ಪು ಪಟ್ಟಿ ಧರಿಸಿದ ಆಟಗಾರರು

   

– ಎಕ್ಸ್ ಚಿತ್ರ (ಬಿಸಿಸಿಐ)

ಲೀಡ್ಸ್: ಭಾರತ–ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲ ಪಂದ್ಯದ ಆರಂಭಕ್ಕೂ ಮೊದಲು ಮೈದಾನದ ಅಂಪೈರ್‌ಗಳು ಸೇರಿದಂತೆ ಉಭಯ ತಂಡಗಳ ಅಟಗಾರರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ADVERTISEMENT

ಜೂನ್ 14ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲ ಹೊತ್ತಿನಲ್ಲೇ ಪತನಗೊಂಡಿತ್ತು. ಘಟನೆಯಲ್ಲಿ ಸಿಬ್ಬಂದಿ ಸೇರಿ ವಿಮಾನದಲ್ಲಿದ್ದ 241 ಮಂದಿ ಮೃತರಾಗಿದ್ದರು.

‘ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಆರಂಭವಾಗುವ ಮುನ್ನ, ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸ್ಮರಣಾರ್ಥ ಭಾರತ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡ ಮೌನಾಚರಣೆ ನಡೆಸಿದವು’ ಎಂದು ಬಿಸಿಸಿಐ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಅಲ್ಲದೆ ಮೃತರ ಸ್ಮರಣಾರ್ಥ ಕಪ್ಪು ಪಟ್ಟಿ ಧರಿಸಿ ಆಟಗಾರರು ಮೈದಾನಕ್ಕೆ ಇಳಿದಿದ್ದಾರೆ.

‘ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲರ ಕುಟುಂಬ ಮತ್ತು ಸ್ನೇಹಿತರಿಗೆ ಉಭಯ ತಂಡಗಳು ತೀವ್ರ ಸಂತಾಪ ವ್ಯಕ್ತಪಡಿಸುತ್ತವೆ’ ಎಂದು ಬರೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.