ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಬಳಿಕ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಮ್ಯಾಚ್ ರೆಫ್ರಿಯನ್ನು ವಜಾಗೊಳಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಮಾಡಿದ್ದ ಮನವಿಯನ್ನು ಐಸಿಸಿ ತಿರಸ್ಕರಿಸಿದೆ.
ಟಾಸ್ ವೇಳೆ ಹಾಗೂ ಪಂದ್ಯದ ಬಳಿಕ ಭಾರತೀಯ ಆಟಗಾರರು ಪಾಕ್ ಆಟಗಾರರಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ನಾಯಕ ಸೂರ್ಯಕುಮಾರ್ ಯಾದವ್ ಅವರು ಪಹಲ್ಗಾಮ್ ಘಟನೆಯ ಕಾರಣ ಈ ತೀರ್ಮಾನ ಕೈಗೊಂಡಿದ್ದೆವು ಎಂದು ತಿಳಿಸಿದ್ದರು.
‘ಭಾರತೀಯ ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಉಲ್ಲಂಘಿಸಿದ್ದು, ಇದಕ್ಕೆ ಅವಕಾಶ ನೀಡಿದ ಮ್ಯಾಚ್ ರೆಫ್ರಿ ಆಂಡಿ ಪೈಕ್ರಾಫ್ಟ್ ಅವರನ್ನು ವಜಾಗೊಳಿಸಬೇಕು. ಇಲ್ಲದಿದ್ದರೆ ನಾವು ಏಷ್ಯಾ ಕಪ್ನ ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ’ ಎಂದು ಪಿಸಿಬಿ ತಿಳಿಸಿತ್ತು.
ಐಸಿಸಿ ಅಧಿಕಾರಿಗಳು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಟಾಸ್ ವೇಳೆ ಹಸ್ತಲಾಘವ ಬೇಡ ಎಂದು ಮ್ಯಾಚ್ ರೆಫ್ರಿಗೆ ತಿಳಿಸಿದ್ದು, ಆಂಡಿ ಪೈಕ್ರಾಫ್ಟ್ ಅವರನ್ನು ವಜಾಗೊಳಿಸುವುದಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಈ ಕುರಿತು ಪಿಸಿಬಿಗೆ ಮಾಹಿತಿ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.