ಲಂಡನ್: ಇಲ್ಲಿನಲಾರ್ಡ್ಸ್ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಬೇಕಿದ್ದಭಾರತ – ಇಂಗ್ಲೆಂಡ್ಎರಡನೇ ಟೆಸ್ಟ್ ಪಂದ್ಯಮಳೆಯಿಂದಾಗಿ ವಿಳಂಬವಾಗಿದೆ.
ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಕಾದಾಡಿ ಸೋತಿದ್ದ ಭಾರತ ತಂಡ ಇಂಗ್ಲೆಂಡ್ ಎದುರಿನ ಎರಡನೇ ಪಂದ್ಯದಲ್ಲಿ ಬ್ಯಾಟ್ಸ್ಮನ್ಗಳ ಮೇಲೆ ಭರವಸೆ ಇಡಲಾಗಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತದ ಬೌಲರ್ಗಳು ಉತ್ತಮ ಸಾಮರ್ಥ್ಯ ತೋರಿದ್ದರು. ಆದರೆ ಬ್ಯಾಟ್ಸ್ಮನ್ಗಳು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ. ನಾಯಕ ವಿರಾಟ್ ಕೊಹ್ಲಿ ಅವರ ಏಕಾಂಗಿ ಹೋರಾಟದಿಂದಾಗಿ ಮೊದಲ ಇನಿಂಗ್ಸ್ನಲ್ಲಿ ಹಿನ್ನಡೆಯನ್ನು ತಗ್ಗಿಸಲು ತಂಡಕ್ಕೆ ಸಾಧ್ಯವಾಗಿತ್ತು. ಎರಡನೇ ಇನಿಂಗ್ಸ್ನಲ್ಲೂ ಕೊಹ್ಲಿ ಮಿಂಚಿದ್ದರು. ಇತರ ಬ್ಯಾಟ್ಸ್ಮನ್ಗಳಿಂದ ಸೂಕ್ತ ಬೆಂಬಲ ಸಿಕ್ಕಿದ್ದರೆ ಭಾರತಕ್ಕೆ ಗೆದ್ದು ಸಂಭ್ರಮಿಸುವ ಅವಕಾಶ ಇತ್ತು. ಆದರೆ ಪಂದ್ಯದಲ್ಲಿ ತಂಡ 31 ರನ್ಗಳ ಸೋಲೊಪ್ಪಿಕೊಳ್ಳಬೇಕಾಗಿತ್ತು.
*
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.