ಮುಂಬೈ: ಇಂಗ್ಲೆಂಡ್ನಲ್ಲಿ ಮೇ 30ರಿಂದ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಸೋಮವಾರ ಆಯ್ಕೆ ಮಾಡಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದು, ಕನ್ನಡಿಗ ಕೆ.ಎಲ್ ರಾಹುಲ್ಗೆ ಅವಕಾಶ ಸಿಕ್ಕಿದೆ.
ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್ ರಾಹುಲ್, ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಕೇದಾರ್ ಜಾದವ್, ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರಿತ್ ಭೂಮ್ರಾ, ಹರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮದ್ ಶಮಿ.
ಯುವ ಆಟಗಾರ ರಿಷಭ್ ಪಂತ್ ಅವರು ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿತ್ತು. ಆದರೆ, ಆ ನಿರೀಕ್ಷೆ ಹುಸಿಯಾಗಿದೆ. ಆದರೆ, ದಿನೇಶ್ ಕಾರ್ತಿಕ್ ಅವರು ಎಲ್ಲರ ನಿರೀಕ್ಷೆಯನ್ನೂ ಮೀರಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ವಿಶ್ವಕಪ್ ತಂಡದ ಮೂಲಕಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ಕಾಯುತ್ತಿದ್ದ ಯುವರಾಜ್ ಸಿಂಗ್ ಅವರ ಆಸೆಯೂ ಈಡೇರಿಲ್ಲ.
ಇನ್ನಷ್ಟು:
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.