ADVERTISEMENT

ಆಂತರಿಕ ಮಾತುಕತೆ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ: ದ್ರಾವಿಡ್

ಪಿಟಿಐ
Published 25 ಡಿಸೆಂಬರ್ 2021, 19:31 IST
Last Updated 25 ಡಿಸೆಂಬರ್ 2021, 19:31 IST
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್   

ಸೆಂಚುರಿಯನ್: ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೈಬಿಡುವ ಕುರಿತು ಬಿಸಿಸಿಐ ಅಧಿಕಾರಿಗಳು ಮತ್ತು ಆಯ್ಕೆಗಾರರೊಂದಿಗೆ ನಡೆಸಿದ ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಂತರಿಕ ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ‘ ಎಂದರು.

‘ವಿರಾಟ್ ಕೊಹ್ಲಿ ನಾಯಕರಾಗಿ ಮತ್ತು ಆಟಗಾರರಾಗಿ ತಂಡಕ್ಕೆ ನೀಡಿರುವ ಕೊಡುಗೆಯು ಬಹಳ ದೊಡ್ಡದು. ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಲು ಇಷ್ಟಪಡುವ ಆಟಗಾರರಲ್ಲಿ ವಿರಾಟ್ ಕೂಡ ಒಬ್ಬರು. ಅವರ ಸ್ಪರ್ಧಾತ್ಮಕ ಮನೋಭಾವ ಅಮೋಘವಾದದ್ದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.