ದುಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪ್ಲೇ-ಆಫ್ ಪಂದ್ಯದಿಂದ 'ಮಿಸ್ಟರ್ ಐಪಿಎಲ್' ಖ್ಯಾತಿಯ ಸುರೇಶ್ ರೈನಾ ಅವರನ್ನು ಕೈಬಿಟ್ಟಿರುವುದು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಟಾಸ್ ವೇಳೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ನಾಯಕ ಮಹೇಂದ್ರ ಸಿಂಗ್ ಧೋನಿ ತಿಳಿಸಿದರು. ಕೆಲವೇ ಹೊತ್ತಿನಲ್ಲಿ ಟ್ವಿಟರ್ನಲ್ಲಿ 'No Raina' ಹ್ಯಾಶ್ಟ್ಯಾಗ್ ಟ್ರೆಂಡ್ ಆಗಲು ಶುರುವಾಯಿತು.
ರೈನಾ ಅವರನ್ನು ಕೈಬಿಡಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಕಳಪೆ ಫಾರ್ಮ್ ಹಾಗೂ ಫಿಟ್ ಆಗಿಲ್ಲವೆಂಬ ಕಾರಣಕ್ಕೆ ಲೀಗ್ ಹಂತದ ಕೊನೆಯ ಕೆಲವು ಪಂದ್ಯಗಳಲ್ಲಿ ಆಡಿರಲಿಲ್ಲ. ಈಗ ಮೊದಲ ಕ್ವಾಲಿಫೈಯರ್ನಲ್ಲೂ ಆಯ್ಕೆಗೆ ಪರಿಗಣಿಸಲಾಗಲಿಲ್ಲ.
ಅಂದ ಹಾಗೆ ಚೆನ್ನೈ ಇದೇ ಮೊದಲ ಬಾರಿಗೆ, ರೈನಾ ಇಲ್ಲದೆಯೇ ಪ್ಲೇ-ಆಫ್ನಲ್ಲಿ ಕಣಕ್ಕಿಳಿದಿದೆ. ರೈನಾ ಸ್ಥಾನವನ್ನು ರಾಬಿನ್ ಉತ್ತಪ್ಪ ತುಂಬಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.