ADVERTISEMENT

IPL 2021 | RCB vs KKR: ಸುನಿಲ್ ಆಲ್‌ರೌಂಡರ್ ಆಟಕ್ಕೆ ಮಣಿದ ಆರ್‌ಸಿಬಿ ಟ್ರೋಫಿ ಕನಸು ಭಗ್ನ

ಶಾರ್ಜಾ: ಸುನಿಲ್ ನಾರಾಯಣ್ ಆಲ್‌ರೌಂಡರ್ ಆಟದ (4 ವಿಕೆಟ್ ಹಾಗೂ 26 ರನ್) ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್‌ನಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್‌ನಲ್ಲಿ ಆರ್‌ಸಿಬಿಯ ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಕೊನೆಗೂ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಪ್ ಗೆಲ್ಲುವ ಆಸೆಯೂ ಈಡೇರಲಿಲ್ಲ.

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 18:11 IST
Last Updated 11 ಅಕ್ಟೋಬರ್ 2021, 18:11 IST

ವಿರಾಟ್ ನಾಯಕತ್ವದಲ್ಲಿ ನನಸಾಗದ ಟ್ರೋಫಿ ಗೆಲ್ಲುವ ಕನಸು - ಸಂಪೂರ್ಣ ವರದಿ ಓದಿ

ಕೆಕೆಆರ್ ಗೆಲುವಿನ ರೋಚಕ ಕ್ಷಣ

ಭಾವುಕರಾದ ವಿರಾಟ್ ಕೊಹ್ಲಿ

ಕೆಕೆಆರ್‌ಗೆ 4 ವಿಕೆಟ್ ಅಂತರದ ರೋಚಕ ಗೆಲುವು

ಶಾರ್ಜಾ: ಸುನಿಲ್ ನಾರಾಯಣ್ ಆಲ್‌ರೌಂಡರ್ ಆಟದ (4 ವಿಕೆಟ್ ಹಾಗೂ 26 ರನ್) ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್‌ನಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. 

ಇದರೊಂದಿಗೆ ಐಪಿಎಲ್‌ನಲ್ಲಿ ಆರ್‌ಸಿಬಿಯ ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಕೊನೆಗೂ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಪ್ ಗೆಲ್ಲುವ ಆಸೆಯೂ ಈಡೇರಲಿಲ್ಲ. 

ADVERTISEMENT

ಈ ಹಿಂದೆಯೇ ಪ್ರಸಕ್ತ ಸಾಲಿನ ಬಳಿಕ ಆರ್‌ಸಿಬಿ ನಾಯಕತ್ವ ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು. ಇದರೊಂದಿಗೆ ಕೊಹ್ಲಿ ಮುನ್ನಡೆಸಿದ ಕೊನೆಯ ಪಂದ್ಯದಲ್ಲಿ ಸೋಲು ಎದುರಾಗುವುದರೊಂದಿಗೆ ಕಪ್ ಗೆಲ್ಲುವ ಕನಸು ಕಮರಿದೆ. 

ಅತ್ತ ಎರಡು ಬಾರಿಯ ಚಾಂಪಿಯನ್ ಕೆಕೆಆರ್, ಬುಧವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸವಾಲನ್ನು ಎದುರಿಸಲಿದೆ. ಅಲ್ಲಿ ಗೆದ್ದ ತಂಡವು ಶುಕ್ರವಾರದಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪ್ರಶಸ್ತಿಗಾಗಿ ಸೆಣಸಲಿವೆ. 

ಮೊದಲು ಸುನಿಲ್ ನಾರಾಯಣ್ (21ಕ್ಕೆ 4 ವಿಕೆಟ್) ಸ್ಪಿನ್ ಮೋಡಿಗೆ ತತ್ತರಿಸಿದ ಆರ್‌ಸಿಬಿ ಏಳು ವಿಕೆಟ್ ನಷ್ಟಕ್ಕೆ 138 ರನ್‌ ಗಳಿಸಲಷ್ಟೇ ಸಮರ್ಥವಾಯಿತು. ವಿರಾಟ್ ಕೊಹ್ಲಿ (39), ಎಬಿ ಡಿವಿಲಿಯರ್ಸ್ (11), ಗ್ಲೆನ್ ಮ್ಯಾಕ್ಸ್‌ವೆಲ್ (15) ಹಾಗೂ ಶ್ರೀಕರ್ ಭರತ್ (9) ವಿಕೆಟ್‌ಗಳನ್ನು ಕಬಳಿಸಿದ ನಾರಾಯಣ್ ಆರ್‌ಸಿಬಿ ಓಟಕ್ಕೆ ಕಡಿವಾಣ ಹಾಕಿದರು. 

ಬಳಿಕ ಒಂದು ಹಂತದಲ್ಲಿ ಕೆಕೆಆರ್ 11 ಓವರ್‌ಗಳಲ್ಲಿ 79 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ನಾರಾಯಣ್, ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಕೆಆರ್ ಗೆಲುವಿನ ರೂವಾರಿ ಎನಿಸಿದರು. ಡೇನಿಯಲ್ ಕ್ರಿಸ್ಟಿಯನ್ ಎಸೆದ ಇನ್ನಿಂಗ್ಸ್‌ನ 12 ಓವರ್‌ನಲ್ಲಿ ನಾರಾಯಣ್ ಮೂರು ಸಿಕ್ಸರ್ ಸೇರಿದಂತೆ ಒಟ್ಟು 22 ರನ್ ಸೊರೆಗೈದರು. ಇಲ್ಲಿಂದ ಬಳಿಕ ಪಂದ್ಯ ಆರ್‌ಸಿಬಿ ಹಿಡಿತದಿಂದ ಜಾರಿತು. 

ಅಂತಿಮವಾಗಿ ಇನ್ನು ಎರಡು ಎಸೆತಗಳು ಬಾಕಿ ಉಳಿದಿರುವಂತೆಯೇ ಕೆಕೆಆರ್ ಆರು ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು. 

ಸಿರಾಜ್ ನಿಖರ ದಾಳಿ

ನಾರಾಯಣ್ ಸ್ಫೋಟಕ ಬ್ಯಾಟಿಂಗ್

ಚಾಹಲ್ ಮೋಡಿ, ರಾಣಾ ಔಟ್

ಅಯ್ಯರ್ ವಿಕೆಟ್ ಪಡೆದ ಹರ್ಷಲ್

ತ್ರಿಪಾಠಿ ಔಟ್ ಮಾಡಿದ ಚಾಹಲ್

10 ಓವರ್ ಅಂತ್ಯಕ್ಕೆ ಕೆಕೆಆರ್ 74/2

ಕೊಹ್ಲಿ, ಮ್ಯಾಕ್ಸ್‌ವೆಲ್ ಮೈಲಿಗಲ್ಲು

ಪವರ್ ಪ್ಲೇ ಅಂತ್ಯಕ್ಕೆ ಕೆಕೆಆರ್ 48/1

ಕೆಕೆಆರ್ ಉತ್ತಮ ಆರಂಭ

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೆಕೆಆರ್‌ಗೆ ಶುಭಮನ್ ಗಿಲ್ ಹಾಗೂ ವೆಂಕಟೇಶ್ ಅಯ್ಯರ್ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 5.2 ಓವರ್‌ಗಳಲ್ಲಿ 41 ರನ್‌ಗಳ ಜೊತೆಯಾಟ ಕಟ್ಟಿದರು. ಈ ಹಂತದಲ್ಲಿ 29 ರನ್ ಗಳಿಸಿದ ಗಿಲ್ ಅವರನ್ನು ಹರ್ಷಲ್ ಪಟೇಲ್ ಔಟ್ ಮಾಡಿದರು. 

ಸುನಿಲ್‌ಗೆ ನಾಲ್ಕು ವಿಕೆಟ್, ಆರ್‌ಸಿಬಿ 138/7

ಸುನಿಲ್ ನಾರಾಯಣ್ (21ಕ್ಕೆ 4 ವಿಕೆಟ್) ಸ್ಪಿನ್ ಮೋಡಿಗೆ ಸಿಲುಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಸೋಮವಾರ ನಡೆಯುತ್ತಿರುವ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 138 ರನ್‌ ಗಳಿಸಲಷ್ಟೇ ಸಮರ್ಥವಾಯಿತು. 

ನಾಯಕ ವಿರಾಟ್ ಕೊಹ್ಲಿ (39), ಎಬಿ ಡಿವಿಲಿಯರ್ಸ್ (11), ಗ್ಲೆನ್ ಮ್ಯಾಕ್ಸ್‌ವೆಲ್ (15) ಹಾಗೂ ಶ್ರೀಕರ್ ಭರತ್ (9) ವಿಕೆಟ್‌ಗಳನ್ನು ಕಬಳಿಸಿದ ಸುನಿಲ್ ನಾರಾಯಣ್ ಆರ್‌ಸಿಬಿ ಓಟಕ್ಕೆ ಕಡಿವಾಣ ಹಾಕಿದರು. 

ಮ್ಯಾಕ್ಸ್‌ವೆಲ್ ಔಟ್ ಮಾಡಿದ ನಾರಾಯಣ್‌ಗೆ 4ನೇ ವಿಕೆಟ್

ಮ್ಯಾಕ್ಸ್‌ವೆಲ್ ಅಬ್ಬರದ ನಿರೀಕ್ಷೆಯಲ್ಲಿ ಆರ್‌ಸಿಬಿ

ವಿಲಿಯರ್ಸ್ ಕ್ಲೀನ್ ಬೌಲ್ಡ್ ಮಾಡಿದ ನಾರಾಯಣ್

ವಿರಾಟ್ ಕ್ಲೀನ್ ಬೌಲ್ಡ್ ಮಾಡಿದ ನಾರಾಯಣ್

ಸುನಿಲ್ ನಾರಾಯಣ್ ಸ್ಪಿನ್ ಮೋಡಿ

ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ (39) ಜೊತೆಗೆ ಎಬಿ ಡಿವಿಲಿಯರ್ಸ್ (11) ಕ್ಲೀನ್ ಬೌಲ್ಡ್ ಮಾಡಿದ ಸುನಿಲ್ ನಾರಾಯಣ್ ಪಂದ್ಯದಲ್ಲಿ ಕೆಕೆಆರ್ ಹಿಡಿತ ಸಾಧಿಸಲು ನೆರವಾದರು. 

15 ಓವರ್ ‌ಅಂತ್ಯಕ್ಕೆ ಆರ್‌ಸಿಬಿ ನಾಲ್ಕು ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ (13*) ಕ್ರೀಸಿನಲ್ಲಿದ್ದಾರೆ. 

ನಿರಾಸೆ ಮೂಡಿಸಿದ ಭರತ್

10 ಓವರ್ ಅಂತ್ಯಕ್ಕೆ ಆರ್‌ಸಿಬಿ 70/2

10 ಓವರ್ ಅಂತ್ಯಕ್ಕೆ ಆರ್‌ಸಿಬಿ ಎರಡು ವಿಕೆಟ್ ನಷ್ಟಕ್ಕೆ 70  ರನ್ ಗಳಿಸಿದೆ. ನಾಯಕ ವಿರಾಟ್ ಕೊಹ್ಲಿ (32*) ಆಸರೆಯಾಗಿದ್ದಾರೆ. ಈ ನಡುವೆ ಶ್ರೀಕರ್ ಭರತ್ (9) ವೈಫಲ್ಯ ಅನುಭವಿಸಿದರು. 

ಆರ್‌ಸಿಬಿಗೆ ನಾಯಕ ಕೊಹ್ಲಿ ಬಲ

ಪವರ್ ಪ್ಲೇ ಅಂತ್ಯಕ್ಕೆ ಆರ್‌ಸಿಬಿ 53/1

ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್  ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 5.1 ಓವರ್‌ಗಳಲ್ಲಿ 49 ರನ್‌ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ 21 ರನ್ ಗಳಿಸಿದ ಪಡಿಕ್ಕಲ್ ಅವರನ್ನು ಲಾಕಿ ಫರ್ಗ್ಯುಸನ್ ಕ್ಲೀನ್ ಬೌಲ್ಡ್ ಮಾಡಿದರು. 

ಪವರ್ ಪ್ಲೇ  ಅಂತ್ಯಕ್ಕೆ ಆರ್‌ಸಿಬಿ ಒಂದು ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿದೆ. ಕ್ರೀಸಿನಲ್ಲಿರುವ ನಾಯಕ ಕೊಹ್ಲಿ (24*) ಆಸರೆಯಾಗಿದ್ದಾರೆ. 

ಆರ್‌ಸಿಬಿ ಉತ್ತಮ ಆರಂಭ

ಬೆಂಗಳೂರು ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ (15*) ಹಾಗೂ ದೇವದತ್ತ ಪಡಿಕ್ಕಲ್ (8*) ಉತ್ತಮ ಆರಂಭವೊದಗಿಸಿದರು. 3 ಓವರ್ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 24 ರನ್ ಗಳಿಸಿದೆ.  

ರೋಚಕ ಪಂದ್ಯ ಆರಂಭ

ಇತ್ತಂಡಗಳಲ್ಲೂ ಯಾವುದೇ ಬದಲಾವಣೆಗಳಿಲ್ಲ

ಟಾಸ್ ಝಲಕ್

ಆರ್‌ಸಿಬಿಗೆ ಮ್ಯಾಕ್ಸ್‌ವೆಲ್ ಬಲ

ಟಾಸ್ ಗೆದ್ದ ಕೊಹ್ಲಿ ಬ್ಯಾಟಿಂಗ್ ಆಯ್ಕೆ

ಐಪಿಎಲ್‌ನಲ್ಲಿ ಸೋಮವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಎಲಿಮೀಟರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. 

ವಿರಾಟ್ ಕೊಹ್ಲಿ ಶೈಲಿ

ಕೆಕೆಆರ್ ತಯಾರಿ

ಪಂದ್ಯಕ್ಕೂ ಮುನ್ನ

ಟ್ರೋಫಿ ಮೇಲೆ ಎಲ್ಲರ ಕಣ್ಣು

ವಿರಾಟ್, ಎಬಿಡಿ ಜೊತೆಗೆ ಸಂವಾದ

ಆರ್‌ಸಿಬಿ ಅಭಿಮಾನಿಗಳ ಶುಭ ಹಾರೈಕೆ

ಆರ್‌ಸಿಬಿ vs ಕೆಕೆಆರ್ ಪಂದ್ಯದ ಮುನ್ನೋಟ

ಕೊಹ್ಲಿ vs ಮಾರ್ಗನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.