ADVERTISEMENT

IPL 2021: ಮುಂಬೈ ವಿರುದ್ಧ ಸೋಲು, ಕೆಕೆಆರ್‌ ಅಭಿಮಾನಿಗಳಿಗೆ ಕ್ಷಮೆ ಕೋರಿದ ಶಾರುಖ್

ಏಜೆನ್ಸೀಸ್
Published 14 ಏಪ್ರಿಲ್ 2021, 9:47 IST
Last Updated 14 ಏಪ್ರಿಲ್ 2021, 9:47 IST
ಶಾರುಖ್‌ ಖಾನ್‌
ಶಾರುಖ್‌ ಖಾನ್‌   

ಮುಂಬೈ: ಮುಂಬೈ ಇಂಡಿಯನ್ಸ್‌ ವಿರುದ್ಧ ಕೋಲ್ಕತ್ತ ನೈಟ್‌ರೈಡರ್ಸ್‌ ಸೋಲು ಅನುಭವಿಸಿದ ಕಾರಣಕ್ಕೆ ತಂಡದ ಸಹ ಮಾಲೀಕ ಶಾರುಖ್‌ ಖಾನ್‌ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್‌ ಟೂರ್ನಿಯ 5ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ರಾಹುಲ್‌ ಚಹರ್‌ ಮತ್ತು ಕೃಣಾಲ್‌ ಪಾಂಡ್ಯ ಅವರ ಸ್ಪಿನ್‌ ಮೋಡಿಗೆ ತತ್ತರಿಸಿದ ಕೆಕೆಆರ್‌ ತಂಡ 10 ರನ್‌ಗಳಿಂದ ಸೋಲು ಅನುಭವಿಸಿತು.

ಇದಕ್ಕೂ ಮುನ್ನ ಮುಂಬೈ ಎದುರು ಟಾಸ್‌ ಗೆದ್ದ ಕೆಕೆಆರ್‌, ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮುಂಬೈ 20 ಓವರ್‌ಗಳಲ್ಲಿ 152 ರನ್‌ ಗಳಿಸಿ ಆಲೌಟ್‌ ಆಯಿತ್ತು.

ADVERTISEMENT

153 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಕೆಕೆಆರ್ 20 ಓವರ್‌ಗಳಲ್ಲಿ 142 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಪಂದ್ಯ ಸೋತ ಬೆನ್ನಲ್ಲೇ ಬಾಲಿವುಡ್‌ ನಟ ಹಾಗೂ ಕೆಕೆಆರ್ ತಂಡದ ಸಹ ಮಾಲೀಕ ಶಾರುಖ್‌ ಖಾನ್‌ ಟ್ವೀಟ್‌ ಮಾಡಿದ್ದು, ‘ತಮ್ಮ ನೆಚ್ಚಿನ ತಂಡದ ಸೋಲಿನಿಂದ ನಿರಾಶೆಗೊಂಡು ಅಭಿಮಾನಿಗಳಿಗೆ ಕ್ಷಮೆಯಾಚಿಸುತ್ತೇನೆ’ ಎಂದಿದ್ದಾರೆ.

ಮುಂಬೈ ಇಂಡಿಯನ್ಸ್‌ ಪರ ರಾಹುಲ್‌ ಚಹರ್‌ 4, ಟ್ರೆಂಟ್‌ ಬೋಲ್ಟ್‌ 2, ಕೃಣಾಲ್‌ ಪಾಂಡ್ಯ 1 ವಿಕೆಟ್‌ ಪಡೆದು ಮಿಂಚಿದರು.

ಕೆಕೆಆರ್ ಗೆಲುವಿಗೆ ಕೊನೆ ಓವರ್‌ನಲ್ಲಿ 15 ರನ್‌ ಅಗತ್ಯವಿತ್ತು. ಇದೇ ಓವರ್‌ನಲ್ಲಿ ಟ್ರೆಂಟ್‌ ಬೋಲ್ಟ್‌ ಅವರು ರಸೆಲ್ ಮತ್ತು ಪ್ಯಾಟ್ ಕಮಿನ್ಸ್ ಅವರನ್ನು ಔಟ್‌ ಮಾಡುವಲ್ಲಿ ಯಶಸ್ವಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.