ಮುಂಬೈ: ಸಂಪೂರ್ಣ ಫಿಟ್ ಆಗಿರುವ ಬ್ಯಾಟರ್ ಸೂರ್ಯಕುಮಾರ್ ಯಾದವ್, ರಾಜಸ್ಥಾನ್ ರಾಯಲ್ಸ್ ವಿರುದ್ಧ ಶನಿವಾರ ನಡೆಯಲಿರುವ ಪಂದ್ಯಕ್ಕೆ ಆಯ್ಕೆಗೆ ಲಭ್ಯವಿರುತ್ತಾರೆ ಎಂದು ಮುಂಬೈ ಇಂಡಿಯನ್ಸ್ ಕ್ರಿಕೆಟ್ ನಿರ್ದೇಶಕ ಜಹೀರ್ ಖಾನ್ ತಿಳಿಸಿದ್ದಾರೆ.
ಗಾಯಮುಕ್ತಗೊಂಡಿರುವ ಸೂರ್ಯಕುಮಾರ್, ಮುಂಬೈ ಇಂಡಿಯನ್ಸ್ ಬಯೋಬಬಲ್ ಅನ್ನು ಸೇರಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಮುಂಬೈ, ಶನಿವಾರ ಡಿ.ವೈ. ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಅವರು (ಸೂರ್ಯ) ಆಯ್ಕೆಗೆ ಲಭ್ಯವಿರುತ್ತಾರೆ. ನಾನು ಈಗಾಗಲೇ ಹೇಳಿದಂತೆ ಅವರು ಅಭ್ಯಾಸ ಪ್ರಾರಂಭಿಸಿದ್ದಾರೆ. ಹಾಗಾಗಿ ನಾವೆಲ್ಲ ಕಾತರದಿಂದ ಕಾಯುತ್ತಿದ್ದೇವೆ. ತಂಡದ ಪ್ರಮುಖ ಆಟಗಾರನಾಗಿರುವ ಸೂರ್ಯಕುಮಾರ್ ಅವರನ್ನು ಐಪಿಎಲ್ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ಗಾಯದ ಆತಂಕ ಎದುರಿಸುತ್ತಿದ್ದ ವಿಕೆಟ್ ಕೀಪರ್ ಇಶಾನ್ ಕಿಶನ್ ಕೂಡ ಆಯ್ಕೆಗೆ ಲಭ್ಯ ಎಂದು ಜಹೀರ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.