ರಜತ್ ಪಾಟೀದಾರ್ ಆರ್ಸಿಬಿ ತಂಡದ ನೂತನ ನಾಯಕ
(ಚಿತ್ರ ಕೃಪೆ: X/@RCBTweets)
ಬೆಂಗಳೂರು: ಬಲಗೈ ಬ್ಯಾಟರ್ ರಜತ್ ಪಾಟೀದಾರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಬಹುನಿರೀಕ್ಷಿತ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುಂಚಿತವಾಗಿ ಆರ್ಸಿಬಿ ಈ ಕುರಿತು ನಿರ್ಧಾರ ಪ್ರಕಟಿಸಿದೆ.
ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮತ್ತೆ ಕಪ್ತಾನಗಿರಿ ವಹಿಸಿಕೊಳ್ಳುವ ಕುರಿತು ವರದಿಗಳು ಬಂದಿದ್ದವು. ಆದರೆ ಕೊನೆಗೂ ರಜತ್ ಪಾಟೀದಾರ್ ಅವರಿಗೆ ನಾಯಕತ್ವ ವಹಿಸಿಕೊಡಲು ತಂಡದ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.
2013ರಿಂದ 2021ರವರೆಗೆ ಆರ್ಸಿಬಿ ತಂಡವನ್ನು ಕೊಹ್ಲಿ ಮುನ್ನಡೆಸಿದ್ದರು. 2022ರಿಂದ 2024ರವರೆಗೆ ದಕ್ಷಿಣ ಆಫ್ರಿಕಾದ ಫಫ್ ಡುಪ್ಲೆಸಿ ತಂಡದ ಸಾರಥ್ಯ ವಹಿಸಿದ್ದರು.
ಮತ್ತೊಂದೆಡೆ ಹರಾಜಿಗೆ ಮುಂಚಿತವಾಗಿ ಆರ್ಸಿಬಿ ರಿಟೇನ್ ಮಾಡಿಕೊಂಡ ಆಟಗಾರರಲ್ಲಿ 31 ವರ್ಷ ವಯಸ್ಸಿನ ಪಾಟೀದಾರ್ ಕೂಡ ಒಬ್ಬರಾಗಿದ್ದರು. ಈಗ ಐಪಿಎಲ್ನಲ್ಲಿ ಚೊಚ್ಚಲ ಕಿರೀಟ ಗೆಲ್ಲುವ ದೊಡ್ಡ ಸವಾಲು ಅವರ ಮುಂದಿದೆ.
ಆ್ಯಂಡಿ ಫ್ಲವರ್, ರಜತ್ ಪಾಟೀದಾರ್, ಮೊ ಬೊಬಾಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.