ADVERTISEMENT

ಹಾಸನ: ಐಪಿಎಲ್‌ ಬೆಟ್ಟಿಂಗ್‌; ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 12:03 IST
Last Updated 19 ಏಪ್ರಿಲ್ 2019, 12:03 IST
ಲತೇಶ್‌ ಕುಮಾರ್
ಲತೇಶ್‌ ಕುಮಾರ್   

ಹಾಸನ: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಆಡಿ ಸೋಲು ಅನುಭವಿಸಿದ್ದ ಆಲೂರು ತಾಲ್ಲೂಕಿನ ಕುಂದೂರು ಹೋಬಳಿಯ ಬದುಕರಹಳ್ಳಿ ಗ್ರಾಮದ ಯುವಕ ಲತೇಶ್‌ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನದ ರಾಜೀವ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಈತ, ಪ್ರತಿ ಪಂದ್ಯದಲ್ಲೂ ಬೆಟ್ಟಿಂಗ್ ಕಟ್ಟಲು ಸಾಲ ಮಾಡಿಕೊಂಡಿದ್ದ. ಸಾಲದ ಹಣ ವಾಪಸ್‌ ಮಾಡುವಂತೆ ಸ್ನೇಹಿತರು ಪೀಡಿಸುತ್ತಿದ್ದರಿಂದ ಹೆದರಿ ಮೂರು ದಿನದ ಹಿಂದೆ ವಿಷ ಸೇವಿಸಿದ್ದ ಈತನನ್ನು ಚಿಕತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘₹ 30 ಸಾವಿರ ಹಣ ನೀಡದಿದ್ದರೆ ಮನೆ ಬಳಿ ಬಂದು ಗಲಾಟೆ ಮಾಡುತ್ತೇವೆ ಎಂದು ಸಹಪಾಠಿಗಳಾದ ಸುನಿಲ್, ಗಣೇಶ್, ಎಂಬುವರು ಬೆದರಿಕೆ ಹಾಕಿದ್ದಾರೆ. ಇವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಮೃತನ ಸಂಬಂಧಿ ಹರೀಶ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.