ಪ್ರಾವಿಡೆನ್ಸ್, ಗಯಾನ: ಪಂದ್ಯಗಳನ್ನು ಆರಂಭಿಸಿದ ನಂತರ ಸ್ಥಗಿತಗೊಳಿಸುವುದು ಕ್ರಿಕೆಟ್ನಲ್ಲಿ ಅತ್ಯಂತ ಬೇಸರದ ವಿಷಯ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದರು.
ಗುರುವಾರ ಇಲ್ಲಿ ನಡೆದ ಪಂದ್ಯವನ್ನು ಮಳೆಯ ಕಾರಣದಿಂದ ಅರ್ಧಕ್ಕೇ ಸ್ಥಗಿತಗೊಳಿಸಲಾಗಿತ್ತು. ಒಂದೂವರೆ ತಾಸು ತಡವಾಗಿ ಆರಂಭಗೊಂಡ ಪಂದ್ಯವನ್ನು ಮೊದಲು 43 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ನಂತರ 34 ಓವರ್ಗಳಿಗೆ ಇಳಿಸಲಾಯಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆತಿಥೇಯರು 13 ಓವರ್ಗಳಲ್ಲಿ ಒಂದು ವಿಕೆಟ್ಗೆ 54 ರನ್ ಗಳಿಸಿದ್ದಾಗ ಮತ್ತೆ ಮಳೆ ಸುರಿದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.
ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಕೊಹ್ಲಿ ಹೀಗೆ ಮಾಡುವುದರಿಂದ ಆಟಗಾರರಿಗೆ ಗಾಯಗಳಾಗುವ ಸಾಧ್ಯತೆಗಳು ಇವೆ. ಹೆಚ್ಚು ಬಾರಿ ಪಂದ್ಯ ಸ್ಥಗಿತಗೊಳಿಸಿದರೆ ಹೆಚ್ಚು ಗಾಯಗಳಾಗುವ ಸಂಭವ ಇದೆ. ಈ ಬಗ್ಗೆ ಎಚ್ಚರದಿಂದಿರಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.