ADVERTISEMENT

ICC T20 World Cup | ಗಾಯದ ಸಮಸ್ಯೆ; ಜಸ್‌ಪ್ರೀತ್ ಬೂಮ್ರಾ ಹೊರಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಸೆಪ್ಟೆಂಬರ್ 2022, 10:27 IST
Last Updated 29 ಸೆಪ್ಟೆಂಬರ್ 2022, 10:27 IST
ಜಸ್‌ಪ್ರೀತ್ ಬೂಮ್ರಾ
ಜಸ್‌ಪ್ರೀತ್ ಬೂಮ್ರಾ   

ನವದೆಹಲಿ: ಮುಂಬರುವ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.

ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿರುವ ಪಿಟಿಐ, ಬೆನ್ನುಮೂಳೆಯ ಸ್ಟ್ರೆಸ್ ಫ್ರಾಕ್ಚರ್ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬೂಮ್ರಾ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ.

ಇದರೊಂದಿಗೆ ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆ ಎದುರಾಗಿದೆ. ಇತ್ತೀಚೆಗಷ್ಟೇ ಗಾಯದಿಂದಾಗಿ ಆಲ್‌ರೌಂಡರ್ ರವೀಂದ್ರ ಜಡೇಜ ಸೇವೆಯಿಂದಲೂ ಟೀಮ್ ಇಂಡಿಯಾ ವಂಚಿತವಾಗಿತ್ತು.

ADVERTISEMENT

ಈಗ ಜಸ್‌ಪ್ರೀತ್ ಬೂಮ್ರಾ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಬೂಮ್ರಾ ಅಲಭ್ಯರಾಗಲಿದ್ದಾರೆ. ಗುರುವಾರ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲೂ ಆಡಿರಲಿಲ್ಲ.

ಬೂಮ್ರಾ ಗಾಯದ ಸಮಸ್ಯೆ ಗಂಭೀರವಾಗಿದ್ದು, ಕನಿಷ್ಠ ಆರು ತಿಂಗಳುಗಳ ವಿಶ್ರಾಂತಿ ಬೇಕಾಗಿದೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.