ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಭಾರತ ವೃತ್ತಿಪರ ಗಾಲ್ಫ್ ಟೂರ್ (ಪಿಜಿಟಿಐ) ಮಂಡಳಿಯಲ್ಲಿ ಸದಸ್ಯರಾಗಿ ಸೋಮವಾರ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ 1983ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕರಾಗಿದ್ದ ಕಪಿಲ್, ದೇಶದಲ್ಲಿ ಗಾಲ್ಫ್ ಕ್ರೀಡೆಯ ಬೆಳವಣಿಗೆಗೆ ಶ್ರಮಿಸುತ್ತೇನೆ ಎಂದಿದ್ದಾರೆ.
‘ಕಪಿಲ್ ದೇವ್ ಸೇರ್ಪಡೆ ಕುರಿತು ಮಾತನಾಡಿರುವ ಗಾಲ್ಫರ್ ಜೀವ್ ಮಿಲ್ಕಾ ಸಿಂಗ್, ‘ಇದರಿಂದ ಪಿಜಿಟಿಐಗೆ ಬಹಳಷ್ಟು ಅನುಕೂಲವಾಗಲಿದೆ. ಅವರು ಕ್ರೀಡಾ ದಂತಕತೆ, ಗಾಲ್ಫ್ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡವರು. ಅವರ ಅನುಭವವು ಗಾಲ್ಫ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲಿದೆ‘ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.