ADVERTISEMENT

‘ಕಾಫಿ’ ಕಾರ್ಯಕ್ರಮಕ್ಷಮೆ ಕೋರಿದ ಕರಣ್‌ ಜೋಹರ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 18:58 IST
Last Updated 23 ಜನವರಿ 2019, 18:58 IST

ಮುಂಬೈ:ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ಅವರು ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದ ನಿರ್ಮಾಪಕ, ನಿರೂಪಕ ಕರಣ್ ಜೋಹರ್ ಕ್ಷಮೆ ಕೋರಿದ್ದಾರೆ.

‘ಆ ದಿನದ ಚರ್ಚೆಯನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಎಲ್ಲೆ ಮೀರಿದ ಹೇಳಿಕೆಗಳು ಎಂದು ಟೀಕೆಗಳು ಕೇಳಿಬಂದಿವೆ’ ಎಂದು ಕರಣ್‌ ಇ.ಟಿ.ನೌ ಸಂದರ್ಶನದಲ್ಲಿ ಹೇಳಿದ್ದಾರೆ.

‘ಆ ಘಟನೆ ನನ್ನ ಕಾರ್ಯಕ್ರಮದಲ್ಲಿ ಆಗಿರುವುದರಿಂದ ಕ್ಷಮೆ ಕೋರುತ್ತೇನೆ’ ಎಂದು ಅವರು ನುಡಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.