ನವದೆಹಲಿ: ಮೊಣಕಾಲು ನೋವಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ವೇಗಿ ಟಿ. ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾದರು. ನೋವಿನ ಹಿನ್ನೆಲೆಯಲ್ಲಿ ಅವರು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಐಪಿಎಲ್ನಲ್ಲಿನಟರಾಜನ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಾರೆ.
ಈ ವರ್ಷದ ಆರಂಭದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಸರಣಿಯಲ್ಲಿ ಅವರು ಗಾಯಗೊಂಡಿದ್ದರು.
‘ನಾನು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯಕೀಯ ತಂಡಕ್ಕೆ ಕೃತಜ್ಞನಾಗಿದ್ದೇನೆ. ಶುಭಕೋರಿದ ಬಿಸಿಸಿಐಗೂ ಋಣಿಯಾಗಿದ್ದೇನೆ‘ ಎಂದು ನಟರಾಜನ್ ಟ್ವೀಟ್ ಮಾಡಿದ್ದಾರೆ.
ಯಾರ್ಕರ್ ಪರಿಣತ ನಟರಾಜನ್ ಈ ಬಾರಿಯ ಐಪಿಎಲ್ನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.