ಬೆಂಗಳೂರು: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್ಸಿಎ), ಈ ವರ್ಷದ ಎಲ್ಲಾ ಕ್ರಿಕೆಟ್ ಚಟುವಟಿಕೆಗಳನ್ನು ರದ್ದು ಮಾಡಿರುವುದಾಗಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಅವು ಸತ್ಯಕ್ಕೆ ದೂರವಾದವು. ನಾವು ಇದುವರೆಗೂ ಅಂತಹ ತೀರ್ಮಾನವನ್ನು ತೆಗೆದುಕೊಂಡಿಲ್ಲ’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.
‘ಬದಲಾದ ವೇಳಾಪಟ್ಟಿಗೆ ಅನುಗುಣವಾಗಿ ಕೆಎಸ್ಸಿಎ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿರುವುದನ್ನು ಗಮನಿಸುತ್ತಿದ್ದೇವೆ. ಕೋವಿಡ್ ಬಿಕ್ಕಟ್ಟು ಬಗೆಹರಿದ ಬಳಿಕ ಕ್ರಿಕೆಟ್ ಚಟುವಟಿಕೆಗಳನ್ನು ಪುನರಾರಂಭಿಸಲಿದ್ದೇವೆ’ ಎಂದು ಕೆಎಸ್ಸಿಎ ಖಜಾಂಚಿಯೂ ಆಗಿರುವ ಅವರು ಸೋಮವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.