ADVERTISEMENT

ಲೈಂಗಿಕ ಕಿರುಕುಳ ನೀಡಿದ ಆರೋಪ: ರಾಹುಲ್ ಜೊಹ್ರಿ ಅಮಾನತಿಗೆ ಕೆಎಸ್‌ಸಿಎ ಒತ್ತಾಯ

ಪಿಟಿಐ
Published 25 ಅಕ್ಟೋಬರ್ 2018, 19:03 IST
Last Updated 25 ಅಕ್ಟೋಬರ್ 2018, 19:03 IST

ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಒಒ) ರಾಹುಲ್‌ ಜೊಹ್ರಿ ಅವರನ್ನು ತಕ್ಷಣವೇ ಅಮಾನತು ಮಾಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಡಳಿತ ನೋಡಿಕೊಳ್ಳಲು ಸುಪ್ರೀಂಕೋರ್ಟ್‌ನಿಂದ ನೇಮಕಗೊಂಡಿರುವ ಆಡಳಿತಾಧಿಕಾರಿಗಳ ಸಮಿತಿಯನ್ನು (ಸಿಒಎ) ಗುರುವಾರ ಒತ್ತಾಯಿಸಿದೆ.

‘ಕೆಎಸ್‌ಸಿಎ ಜೊತೆಗೆ ತಮಿಳುನಾಡು, ಸೌರಾಷ್ಟ್ರ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ ಮತ್ತು ಗೋವಾ ರಾಜ್ಯ ಸಂಸ್ಥೆಗಳೂ ಜೊಹ್ರಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿವೆ. ಈ ಸಂಬಂಧ ಸಿಒಎ ಮುಖ್ಯಸ್ಥ ವಿನೋದ್‌ ರಾಯ್‌ ಅವರಿಗೆ ಈ ಸಂಸ್ಥೆಗಳು ಪ್ರತ್ಯೇಕವಾಗಿ ಪತ್ರ ಬರೆದಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT