ADVERTISEMENT

ಕೆಎಸ್‌ಸಿಎ: ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 20:30 IST
Last Updated 10 ಅಕ್ಟೋಬರ್ 2019, 20:30 IST
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ರೋಜರ್ ಬಿನ್ನಿ ಅವರನ್ನು ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ ಅವರು ಅಭಿನಂದಿಸಿದರು –ಪ್ರಜಾವಾಣಿ ಚಿತ್ರ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ರೋಜರ್ ಬಿನ್ನಿ ಅವರನ್ನು ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ ಅವರು ಅಭಿನಂದಿಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಗೆ ಚುನಾಯಿರತರಾಗಿರುವ ನೂತನ ಪದಾಧಿಕಾರಿಗಳು ಗುರುವಾರ ಅಧಿಕಾರ ಸ್ವೀಕರಿಸಿದರು.

ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ನೆರವೇರಿತು. ಸಂತೋಷ್ ಮೆನನ್ (ಕಾರ್ಯದರ್ಶಿ), ಜೆ. ಅಭಿರಾಮ್ (ಉಪಾಧ್ಯಕ್ಷರು), ವಿನಯ್ ಮೃತ್ಯುಂಜಯ್ (ಖಜಾಂಚಿ) ಮತ್ತು ಶಾವೀರ್ ತಾರಾಪೂರ್ (ಜಂಟಿ ಕಾರ್ಯದರ್ಶಿ) ಕೂಡ ಈ ಸಂದರ್ಭದಲ್ಲಿ ಪದಗ್ರಹಣ ಮಾಡಿದರು. ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ ಅವರು ಎಲ್ಲರಿಗೂ ಶುಭ ಹಾರೈಸಿದರು.

ಅಕ್ಟೋಬರ್ 3ರಂದು ನಡೆದಿದ್ದ ಕೆಎಸ್‌ಸಿಎ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಳಗವು ಜಯಗಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.