ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಗೆ ಚುನಾಯಿರತರಾಗಿರುವ ನೂತನ ಪದಾಧಿಕಾರಿಗಳು ಗುರುವಾರ ಅಧಿಕಾರ ಸ್ವೀಕರಿಸಿದರು.
ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ನೆರವೇರಿತು. ಸಂತೋಷ್ ಮೆನನ್ (ಕಾರ್ಯದರ್ಶಿ), ಜೆ. ಅಭಿರಾಮ್ (ಉಪಾಧ್ಯಕ್ಷರು), ವಿನಯ್ ಮೃತ್ಯುಂಜಯ್ (ಖಜಾಂಚಿ) ಮತ್ತು ಶಾವೀರ್ ತಾರಾಪೂರ್ (ಜಂಟಿ ಕಾರ್ಯದರ್ಶಿ) ಕೂಡ ಈ ಸಂದರ್ಭದಲ್ಲಿ ಪದಗ್ರಹಣ ಮಾಡಿದರು. ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ ಅವರು ಎಲ್ಲರಿಗೂ ಶುಭ ಹಾರೈಸಿದರು.
ಅಕ್ಟೋಬರ್ 3ರಂದು ನಡೆದಿದ್ದ ಕೆಎಸ್ಸಿಎ ಚುನಾವಣೆಯಲ್ಲಿ ರೋಜರ್ ಬಿನ್ನಿ ಬಳಗವು ಜಯಗಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.