ADVERTISEMENT

ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಸಾಧಿಸಲಿ: ದಸರಾ ಹಬ್ಬಕ್ಕೆ ಶುಭ ಕೋರಿದ ಸಚಿನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಅಕ್ಟೋಬರ್ 2023, 10:12 IST
Last Updated 24 ಅಕ್ಟೋಬರ್ 2023, 10:12 IST
<div class="paragraphs"><p>ಚಿತ್ರಕೃಪೆ:&nbsp;@sachin_rt</p></div><div class="paragraphs"><p><br></p></div>

ಚಿತ್ರಕೃಪೆ: @sachin_rt


   

ಮುಂಬೈ: ಭಾರತ ಕ್ರಿಕೆಟ್‌ನ ಜೀವಂತ ದಂತಕಥೆ ಎಂದೇ ಖ್ಯಾತಿ ಪಡೆದಿರುವ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೊಲ್ಕರ್‌ ಅವರು ವಿಜಯ ದಶಮಿಯ ಪ್ರಯುಕ್ತ ಇಂದು( ಮಂಗಳವಾರ ) ಶುಭಾಶಯ ಕೋರಿದ್ದಾರೆ

ADVERTISEMENT

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು.. ಚೆಂಡು ಬೌಂಡರಿಯನ್ನು ದಾಟಿದಂತೆ, ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಸಾಧಿಸಲಿ. ನಿಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿ, ಸರಿಯಾದ ಕಾರಣಕ್ಕೆ ಮತ್ತು ಉತ್ತಮ ವಿಷಯಗಳ ಪರ ಬ್ಯಾಟಿಂಗ್‌ ಮುಂದುವರಿಸಿ ಎಂದು ಬರೆದುಕೊಂಡಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕ್ರಿಕೆಟರ್‌ ಸಚಿನ್‌ ತೆಂಡೂಲ್ಕರ್‌ ಅವರನ್ನು‘ರಾಷ್ಟ್ರೀಯ ಐಕಾನ್‌’ ಆಗಿ ಚುನಾವಣಾ ಆಯೋಗವು ನೇಮಕ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.