ADVERTISEMENT

ರಣಜಿ: ಕರ್ನಾಟಕಕ್ಕೆ ಮನೀಷ್ ಬಲ

ತಂಡಕ್ಕೆ ಮರಳಿದ ಸುಚಿತ್, ಪ್ರತೀಕ್; ಕೌಶಿಕ್, ಪ್ರವೀಣ್ ದುಬೆ, ನಿಶ್ಚಲ್‌ಗೆ ಕೊಕ್

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 19:45 IST
Last Updated 17 ಫೆಬ್ರುವರಿ 2020, 19:45 IST
ಮನೀಷ್ ಪಾಂಡೆ
ಮನೀಷ್ ಪಾಂಡೆ   

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಎದುರು ಇದೇ 20ರಿಂದ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಜಮ್ಮುವಿನಲ್ಲಿ ಪಂದ್ಯ ನಡೆಯಲಿದೆ.

ಸ್ಫೋಟಕ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ, ಎಡಗೈ ಮಧ್ಯಮ ವೇಗಿ ಪ್ರತೀಕ್ ಜೈನ್ ಮತ್ತು ಎಡಗೈ ಸ್ಪಿನ್ನರ್ ಜೆ.ಸುಚಿತ್ ತಂಡಕ್ಕೆ ಮರಳಿದ್ದಾರೆ. ಮಧ್ಯಮ ವೇಗಿ ವಿ. ಕೌಶಿಕ್, ಬ್ಯಾಟ್ಸ್‌ಮನ್‌ ಮತ್ತು ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ ಹಾಗೂ ಬ್ಯಾಟ್ಸ್‌ಮನ್ ಡೇಗಾ ನಿಶ್ಚಲ್‌ ಅವರನ್ನು ಕೈಬಿಡಲಾಗಿದೆ.

ತಂಡ: ಕರುಣ್ ನಾಯರ್ (ನಾಯಕ), ಆರ್‌.ಸಮರ್ಥ್, ದೇವದತ್ತ ಪಡಿಕ್ಕಲ್, ಮನೀಷ್ ಪಾಂಡೆ, ಪವನ್ ದೇಶಪಾಂಡೆ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಕೃಷ್ಣಪ್ಪ ಗೌತಮ್, ಅಭಿಮನ್ಯು ಮಿಥುನ್, ಕೆ.ವಿ.ಸಿದ್ಧಾರ್ಥ್, ಪ್ರಸಿದ್ಧ ಕೃಷ್ಣ, ಜೆ.ಸುಚಿತ್, ಪ್ರತೀಕ್ ಜೈನ್, ರೋನಿತ್ ಮೋರೆ, ಬಿ.ಆರ್.ಶರತ್. ಕೋಚ್: ಯರೇಗೌಡ, ಬೌಲಿಂಗ್ ಕೋಚ್: ಎಸ್‌.ಅರವಿಂದ್, ಫೀಲ್ಡಿಂಗ್ ಕೋಚ್‌: ಶಬರೀಶ್ ಮೋಹನ್.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.