ನವದೆಹಲಿ: ಭಾರತ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಸೋತಿರುವುದಕ್ಕೆ ನಿರಾಸೆಯಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರಾಶೆ ತಂದಿದೆ, ಆದರೆ ಕೊನೆಯವರೆಗೂ ಟೀಂ ಇಂಡಿಯಾದ ಹೋರಾಟ ವಿರೋಚಿತವಾಗಿತ್ತು ಎಂದು ಅವರು ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಬೌಲಿಂಗ್, ಬ್ಯಾಟಿಂಗ್ ಮತ್ತು ಫಿಲ್ಡೀಂಗ್ ಉತ್ತಮವಾಗಿತ್ತು ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
ಸೋಲು, ಗೆಲುವು ಜೀವನದ ಒಂದು ಭಾಗ, ಭವಿಷ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿ ಎಂದು ಟ್ವೀಟ್ ಮೂಲಕ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.