ADVERTISEMENT

ವಿಜಯ್‌ ಹಜಾರೆ: ಕರ್ನಾಟಕಕ್ಕೆ ಮುಂಬೈ ಸವಾಲು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 19:43 IST
Last Updated 10 ಡಿಸೆಂಬರ್ 2021, 19:43 IST
ಮನೀಷ್ ಪಾಂಡೆ –ಪ್ರಜಾವಾಣಿ ಚಿತ್ರ
ಮನೀಷ್ ಪಾಂಡೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಶನಿವಾರ ಮುಂಬೈ ವಿರುದ್ಧ ಸೆಣಸಲಿದೆ. ತಿರುವನಂತಪುರದ ಮಂಗಳಾಪುರಂ ಕ್ರೀಡಾಂಗಣದಲ್ಲಿ ನಡೆಯಲಿರುವ ‘ಬಿ’ ಗುಂಪಿನ ಪಂದ್ಯದಲ್ಲಿ ಪ್ರಬಲ ಪೈಪೋಟಿ ನಡೆಯುವ ಸಾಧ್ಯತೆ ಇದೆ.

ಮನೀಷ್ ಪಾಂಡೆ ನಾಯಕತ್ವದ ಕರ್ನಾಟಕ ಮೊದಲ ಪಂದ್ಯದಲ್ಲಿ ಪುದುಚೇರಿ ವಿರುದ್ಧ 236 ರನ್‌ಗಳ ಜಯ ಗಳಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ತಮಿಳುನಾಡಿಗೆ ಮಣಿದಿತ್ತು. ಮುಂಬೈ ಕೂಡ ಒಂದು ಪಂದ್ಯದಲ್ಲಿ ಜಯ ಗಳಿಸಿದ್ದು ಒಂದರಲ್ಲಿ ಸೋತಿದೆ. ಮೊದಲ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಸೋತಿದ್ದ ತಂಡ ನಂತರ ಬರೋಡಾವನ್ನು ಮಣಿಸಿತ್ತು.

ಸೂರ್ಯಕುಮಾರ್ ಯಾದವ್‌ ಮತ್ತು ಶಿವಂ ದುಬೆ ಅವರಂಥ ಅನುಭವಿಗಳೊಂದಿಗೆ ಯುವ ಆಟಗಾರರ ಬಲವೂ ಮುಂಬೈ ತಂಡಕ್ಕೆ ಇದೆ. ಶಂಸ್ ಮುಲಾನಿ ಕಳೆದ ಪಂದ್ಯದಲ್ಲಿ ಭರ್ಜರಿ ಆಟವಾಡಿದ್ದರು. ಕರ್ನಾಟಕ ತಂಡದಲ್ಲೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ ಆಟಗಾರರು ಇದ್ದಾರೆ. ಅವರ ಅನುಭವವನ್ನು ಸಮಪರ್ಕವಾಗಿ ಬಳಸಿಕೊಳ್ಳಲು ತಂಡ ಯೋಜನೆ ರೂಪಿಸಿಕೊಳ್ಳಬೇಕಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.