ನವದೆಹಲಿ: ಮಾರ್ಚ್ 23ರಂದು ಆರಂಭವಾಗಲಿರುವ ಐಪಿಎಲ್ ಕ್ರಿಕೆಟ್ ಟೂರ್ನಿಯ 12ನೇ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ಕೈಬಿಡಲಾಗಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು ಸಮಾರಂಭಕ್ಕೆ ವೆಚ್ಚ ಮಾಡಲು ತೆಗೆದಿರಿಸಿರುವ ಮೊತ್ತವನ್ನು ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ನೀಡಲು
ನಿರ್ಣಯಿಸಲಾಗಿದೆ.
ಸಿಒಎ ಮುಖ್ಯಸ್ಥ ವಿನೋದ್ ರಾಯ್ ಶುಕ್ರವಾರ ಈ ವಿಷಯ ತಿಳಿಸಿದ್ದು ‘ಹುತಾತ್ಮರ ಕುಟುಂಬಗಳಿಗೆ ₹ 5 ಕೋಟಿ ನೀಡುವ ಪ್ರಸ್ತಾವವನ್ನು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ ಮುಂದಿಟ್ಟಿದ್ದರು’ ಎಂದರು.
ಉದ್ಘಾಟನಾ ಸಮಾರಂಭಕ್ಕೆ ₹ 15 ಕೋಟಿ ವೆಚ್ಚ ಮಾಡುವ ಚಿಂತನೆ ಇತ್ತು ಎಂದು ಹೇಳಲಾಗುತ್ತಿದ್ದು ಈ ಮೊತ್ತವನ್ನು ಹುತಾತ್ಮರ ಕುಟುಂಬಗಳಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.