ಮುಂಬೈ: ಕಾಲ್ಬೆರಳಿನ ಗಾಯಕ್ಕೆ ಒಳಗಾಗಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಂಕ್ ಅಗರವಾಲ್, ಐಪಿಎಲ್ನಲ್ಲಿ ಭಾನುವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಮಯಂಕ್ ಅನುಪಸ್ಥಿತಿಯಲ್ಲಿ ಪಂಜಾಬ್ ತಂಡವನ್ನು ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ.
ಟಾಸ್ ವೇಳೆ ಮಯಂಕ್ ಗಾಯದ ಬಗ್ಗೆ ಧವನ್ ಮಾಹಿತಿ ನೀಡಿದರು.
ನಿನ್ನೆ (ಶನಿವಾರ) ತರಬೇತಿ ವೇಳೆ ಮಯಂಕ್, ಕಾಲ್ಬೆರಳಿಗೆ ಗಾಯವಾಗಿತ್ತು. ಅವರು ಮುಂದಿನ ಪಂದ್ಯಕ್ಕೆ ಲಭ್ಯರಾಗುವ ನಿರೀಕ್ಷೆಯಿದೆ ಎಂದು ಧವನ್ ಹೇಳಿದ್ದಾರೆ.
ಮಯಂಕ್ ಅಗರವಾಲ್ ಸ್ಥಾನಕ್ಕೆ ಪ್ರಭಸಿಮ್ರಾನ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿರುವ ಪಂಜಾಬ್ 151 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.