ನವದೆಹಲಿ (ಪಿಟಿಐ): ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆ ವಿಚಾರಣೆಗೆ ಸಂಬಂಧಿಸಿದಂತೆ ಹಿರಿಯ ಕ್ರಿಕಟಿಗ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐ ಒಂಬುಡ್ಸ್ಮನ್ ಡಿ.ಕೆ. ಜೈನ್ ನೋಟಿಸ್ ನೀಡಿದ್ದಾರೆ.
ಅವರನ್ನು ಈಚೆಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಮುಖಸ್ಥರನ್ನಾಗಿ ನೇಮಕ ಮಾಡಲಾಗಿದೆ. ಆದರೆ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕತ್ವ ಹೊಂದಿರುವ ಇಂಡಿಯಾ ಸಿಮೆಂಟ್ಸ್ ಸಮೂಹದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಆದ್ದರಿಂದ ದ್ರಾವಿಡ್ ಅವರು ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ ಅವರು ದೂರು ನೀಡಿದ್ದರು.
‘ನಮಗೆ ದೂರು ಬಂದಿದ್ದು ನಿಜ. ಅದನ್ನು ಪರಿಶೀಲಿಸಿದ ನಂತರ ದ್ರಾವಿಡ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅದಕ್ಕೆ ಉತ್ತರಿಸಲು ಅವರಿಗೆ ಎರಡು ವಾರಗಳ ಗಡುವು ನೀಡಲಾಗಿದೆ. ಅವರ ಪ್ರತಿಕ್ರಿಯೆಯ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು’ ಎಂದು ಜೈನ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.