ಮುಂಬೈ: ಸಚಿನ್ ತೆಂಡೂಲ್ಕರ್ ಅವರ ಗುರು, ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಅಚ್ರೇಕರ್ ಬುಧವಾರ(87)ನಿಧನರಾಗಿದ್ದಾರೆ.
1932ರಲ್ಲಿ ಜನಿಸಿದ ಅಚ್ರೇಕರ್ ಮುಂಬೈ ಸ್ಥಳೀಯ ಕ್ರಿಕೆಟ್ನಲ್ಲಿ ಉತ್ತಮ ಆಟಗಾರರಾಗಿ ಹೆಸರು ಗಳಿಸಿದವರಾಗಿದ್ದರು.
ಸಚಿನ್ ತೆಂಡೂಲ್ಕರ್ ಸೇರಿದಂತೆ ವಿನೋದ್ ಕಾಂಬ್ಳಿ, ಅಜಿತ್ ಆಗರ್ಕರ್ ಮೊದಲಾದವರು ಅಚ್ರೇಕರ್ ಗರಡಿಯಲ್ಲಿ ಪಳಗಿದವರಾಗಿದ್ದಾರೆ,
1990ರಲ್ಲಿ ಭಾರತ ಸರ್ಕಾರ ಅಚ್ರೇಕರ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.2010ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.