
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ಇದೇ 24ರಿಂದ 28ರವರೆಗೆ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿವೆ.
ಕರ್ನಾಟಕ ತಂಡವು ಲಖನೌನಲ್ಲಿ ಗುರುವಾರ ಮುಕ್ತಾಯವಾದ ಸೆಮಿಫೈನಲ್ನಲ್ಲಿ ಉತ್ತರಾಖಂಡದ ಎದುರು ಡ್ರಾ ಮಾಡಿಕೊಂಡಿತು. ಮೊದಲ ಇನಿಂಗ್ಸ್ ಮುನ್ನಡೆ ಗಳಿಸಿದ್ದ ಕರ್ನಾಟಕವು ಫೈನಲ್ ಪ್ರವೇಶಿಸಿತು. ಜಮ್ಮು–ಕಾಶ್ಮೀರ ತಂಡವು ಕಲ್ಯಾಣಿಯಲ್ಲಿ ನಡೆದಿದ್ದ ನಾಲ್ಕರ ಘಟ್ಟದ ಪಂದ್ಯದಲ್ಲಿ ಬಂಗಾಳವನ್ನು ಸೋಲಿಸಿ, ಮೊದಲ ಸಲ ಫೈನಲ್ಗೆ ಲಗ್ಗೆ ಹಾಕಿತ್ತು.