ADVERTISEMENT

ರಣಜಿ: ಮುಂಬೈ ಗೆಲುವಿಗೆ 366 ರನ್‌ ಗುರಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2018, 5:45 IST
Last Updated 23 ನವೆಂಬರ್ 2018, 5:45 IST
ಬೆಳಗಾವಿಯಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಬುಧವಾರ ಮುಂಬೈ ತಂಡದ ಬ್ಯಾಟ್ಸ್‌ಮನ್‌ ಔಟ್ ಆದಾಗ ಕರ್ನಾಟಕ ತಂಡದ ಆಟಗಾರರು ರೋನಿತ್‌ ಮೋರೆಗೆ ಅಭಿನಂದಿಸಿದ ಕ್ಷಣ –ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌
ಬೆಳಗಾವಿಯಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಬುಧವಾರ ಮುಂಬೈ ತಂಡದ ಬ್ಯಾಟ್ಸ್‌ಮನ್‌ ಔಟ್ ಆದಾಗ ಕರ್ನಾಟಕ ತಂಡದ ಆಟಗಾರರು ರೋನಿತ್‌ ಮೋರೆಗೆ ಅಭಿನಂದಿಸಿದ ಕ್ಷಣ –ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌   

ಬೆಳಗಾವಿ:ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ಒಂದೂವರೆ ಗಂಟೆ ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ಮುಂಬೈ ವಿರುದ್ಧದ ರಣಜಿ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 51 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು 170 ರನ್ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದೆ.

ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 195 ರನ್ ಮುನ್ನಡೆ ಹೊಂದಿತ್ತು. ಈ ಮೊತ್ತವೂ ಸೇರಿದಂತೆ ರಾಜ್ಯ ತಂಡ ಮುಂಬೈ ಗೆಲುವಿಗೆ 366 ರನ್‌ ಗುರಿ ನಿಗದಿ ಮಾಡಿದೆ. 71 ಓವರ್‌ಗಳಲ್ಲಿ ಈ ಗುರಿ ಮುಟ್ಟಬೇಕಾದ ಸವಾಲು ಮುಂಬೈ ತಂಡದ ಮುಂದಿದೆ.

ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಕೆ.ವಿ. ಸಿದ್ದಾರ್ಥ್‌ ದ್ವಿತೀಯ ಇನಿಂಗ್ಸ್‌ನಲ್ಲಿ 71 ರನ್‌ ಗಳಿಸಿದರು. 125 ಎಸೆತಗಳನ್ನು ಎದುರಿಸಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಸಿದರು. ಇವರ ಮತ್ತೊಂದು ಶತಕಕ್ಕೆ ಕಾಯದೇ ಕರ್ನಾಟಕ ತಂಡ ಇನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ADVERTISEMENT

ಸ್ಟುವರ್ಟ್‌ ಬಿನ್ನಿ 46 ಎಸೆತಗಳಲ್ಲಿ 30 ರನ್ ಕಲೆಹಾಕಿದರು.

ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ವಿದರ್ಭ ಎದುರು ಡ್ರಾ ಮಾಡಿಕೊಂಡಿತ್ತು. ಆದ್ದರಿಂದ ಈ ಬಾರಿಯ ಟೂರ್ನಿಯಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಆಸೆ ಈಡೇರಿಸಬೇಕಾದ ಜವಾಬ್ದಾರಿ ರಾಜ್ಯ ತಂಡದ ಬೌಲರ್‌ಗಳ ಮೇಲಿದೆ.

ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ 400 ರನ್‌ ಗಳಿಸಿತ್ತು. ಮುಂಬೈ 205 ರನ್‌ಗೆ ಆಲೌಟ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.