ಬೆಂಗಳೂರು: ಇದೇ 29ರಿಂದ ಬಂಗಾಳ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯ ದಲ್ಲಿ ಆಡಲಿರುವ ಕರ್ನಾಟಕ ತಂಡದಲ್ಲಿ ಕೆ.ಎಲ್. ರಾಹುಲ್ ಕಣಕ್ಕಿಳಿಯಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್ಗಳ ಟೂರ್ನಿಯ ನಂತರ ಅವರು ಮತ್ತು ಮನೀಷ್ ಪಾಂಡೆ ಭಾರತಕ್ಕೆ ಮರಳಿದ್ದರು. ಆದರೆ ಜಮ್ಮು -ಕಾಶ್ಮೀರ ವಿರುದ್ಧದ ಎಂಟರ ಘಟ್ಟದ ಪಂದ್ಯದಲ್ಲಿ ಅವರು ಆಡಿರಲಿಲ್ಲ. ಮನೀಷ್ ಆಡಿ ದ್ದರು. ಇದೀಗ ರಾಹುಲ್ ಮರಳಿರುವುದರಿಂದ ಪವನ್ ದೇಶಪಾಂಡೆ ಅವರನ್ನು ತಂಡದಿಂದ ಕೈಬಿಡಲಾಗಿದೆ.
ತಂಡ: ಕರುಣ್ ನಾಯರ್ (ನಾಯಕ), ಆರ್. ಸಮರ್ಥ್, ದೇವದತ್ತ ಪಡಿಕ್ಕಲ್, ಮನೀಷ್ ಪಾಂಡೆ, ಕೆ.ಎಲ್. ರಾಹುಲ್, ಶರತ್ ಶ್ರೀನಿವಾಸ್ (ವಿಕೆಟ್ಕೀಪರ್), ಶ್ರೇಯಸ್ ಗೋಪಾಲ್, ಕೃಷ್ಣಪ್ಪ ಗೌತಮ್, ಅಭಿಮನ್ಯು ಮಿಥುನ್, ಕೆ.ವಿ. ಸಿದ್ಧಾರ್ಥ್, ಪ್ರಸಿದ್ಧ ಎಂ ಕೃಷ್ಣ, ಜೆ. ಸುಚಿತ್, ಪ್ರತೀಕ್ ಜೈನ್, ರೋನಿತ್ ಮೋರೆ, ಬಿ.ಆರ್. ಶರತ್ (ವಿಕೆಟ್ಕೀಪರ್). ಯರೇಗೌಡ (ಕೋಚ್), ಎಸ್. ಅರವಿಂದ್ (ಬೌಲಿಂಗ್ ಕೋಚ್), ಶಬರೀಶ್ ಪಿ ಮೋಹನ್ (ಫೀಲ್ಡಿಂಗ್ ಕೋಚ್), ಅನುತೋಷ್ ಪಾಲ್ (ಮ್ಯಾನೇಜರ್).
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.