ADVERTISEMENT

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕ ತಂಡಕ್ಕೆ ಮಯಂಕ್ ನಾಯಕ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 13:55 IST
Last Updated 5 ಅಕ್ಟೋಬರ್ 2023, 13:55 IST
ಮಯಂಕ್ ಅಗರವಾಲ್
ಮಯಂಕ್ ಅಗರವಾಲ್   

ಬೆಂಗಳೂರು: ಡೆಹ್ರಾಡೂನ್‌ನಲ್ಲಿ ನಡೆಯಲಿರುವ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಆಡುವ ಕರ್ನಾಟಕ ತಂಡಕ್ಕೆ ಮಯಂಕ್ ಅಗರವಾಲ್ ನಾಯಕರಾಗಿದ್ದಾರೆ.

ಅಕ್ಟೋಬರ್ 16 ರಿಂದ 27ರವರೆಗೆ ಟೂರ್ನಿಯು ನಡೆಯಲಿದೆ.

ಈ ಬಾರಿಯ ದೇಶಿ ಋತುವಿನಲ್ಲಿ ದುಲೀಪ್ ಟ್ರೋಫಿ ಮತ್ತು ದೇವಧರ್ ಟ್ರೋಫಿಯಲ್ಲಿ ಆಡಿದ್ದ ಕರ್ನಾಟಕದ ಆಟಗಾರರು ಉತ್ತಮ ಸಾಧನೆ ಮಾಡಿದ್ದರು. ಮುಂದಿನ ವರ್ಷ ಟಿ20 ವಿಶ್ವಕಪ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ನಡೆಯಲಿವೆ. ಆಯ್ಕೆಗಾರರ ಗಮನ ಸೆಳೆಯಲು ಕರ್ನಾಟಕದ ಆಟಗಾರರಿಗೆ ಈ ಟೂರ್ನಿಯು ಉತ್ತಮ ವೇದಿಕೆಯಾಗಿದೆ.

ADVERTISEMENT

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಗುರುವಾರ ಪ್ರಕಟಿಸಿದ ತಂಡ ಇಂತಿದೆ;

ಮಯಂಕ್ ಅಗರವಾಲ್ (ನಾಯಕ), ದೇವದತ್ತ ಪಡಿಕ್ಕಲ್, ಎಲ್‌.ಆರ್. ಚೇತನ್, ಮನೀಷ್ ಪಾಂಡೆ (ಉಪನಾಯಕ), ಅಭಿನವ್ ಮನೋಹರ್, ಶುಭಾಂಗ್ ಹೆಗಡೆ, ಬಿ.ಆರ್. ಶರತ್ (ವಿಕೆಟ್‌ಕೀಪರ್), ಕೃಷ್ಣಪ್ಪ ಗೌತಮ್, ಪ್ರಸಿದ್ಧ ಎಂ ಕೃಷ್ಣ, ವಿದ್ವತ್ ಕಾವೇರಪ್ಪ, ವಿ. ಕೌಶಿಕ್, ವೈಶಾಖ ವಿಜಯಕುಮಾರ್, ಮನೋಜ್ ಬಾಂಢಗೆ, ಪ್ರವೀಣ ದುಬೆ, ಕೆ.ಎಲ್. ಶ್ರೀಜಿತ್ (ವಿಕೆಟ್‌ಕೀಪರ್), ಆರ್. ಸಮರ್ಥ್.

ಪಿ.ವಿ. ಶಶಿಕಾಂತ್ (ಕೋಚ್), ಮನ್ಸೂರ್ ಅಲಿ ಖಾನ್ (ಬೌಲಿಂಗ್ ಕೋಚ್), ಎ. ರಮೇಶ್ ರಾವ್ (ಮ್ಯಾನೇಜರ್), ಎ. ಜಾಬಪ್ರಭು (ಫಿಸಿಯೋಥೆರಪಿಸ್ಟ್), ಎ. ಕಿರಣ್ (ಸ್ಟ್ರೆಂಥ್–ಕಂಡಿಷನಿಂಗ್ ಕೋಚ್), ಸಿ.ಎಂ. ಸೋಮಸುಂದರ್(ಮಸಾಜ್), ಗಿರಿ (ವಿಡಿಯೊ ಅನಾಲಿಸ್ಟ್)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.