ನವದೆಹಲಿ: ಸೆಪ್ಟೆಂಬರ್ನಲ್ಲಿ ದುಬೈನಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯು ರದ್ದಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
’ಏಷ್ಯಾ ಕಪ್ ರದ್ದಾಗಿದೆ. ಸೆಪ್ಟೆಂಬರ್ನಲ್ಲಿ ನಡೆಯಬೇಕಿತ್ತು‘ ಎಂದು ಬುಧವಾರ ನಡೆದ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಅವರು ಹೇಳಿದ್ಧಾರೆ
ಆದರೆ, ಇದುವರೆಗೂ ಆತಿಥೇಯ ದೇಶದಿಂದ ಅಥವಾ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ)ನಿಂದ ಟೂರ್ನಿಯು ರದ್ದಾದ ಕುರಿತು ಅಧಿಕೃತ ಹೇಳಿಕೆಯು ಹೊರಬಿದ್ದಿಲ್ಲ.
ಸೆಪ್ಟೆಂಬರ್ ತಿಂಗಳಲ್ಲಿ ಏಷ್ಯಾ ಕಪ್ ರದ್ದಾದರೆ ಬಿಸಿಸಿಐಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಸಲು ಹಾದಿ ಸುಗಮವಾಗಲಿದೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.