ನವದೆಹಲಿ: ಭಾರತೀಯರೆಲ್ಲರೂ ಭಾನುವಾರ ರಾತ್ರಿ ಸರಿಯಾಗಿ ಒಂಬತ್ತು ಗಂಟೆಗೆ ಮನೆಯ ವಿದ್ಯುದೀಪಗಳನ್ನು ಆರಿಸಿ ಸತತ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗುವ ಮೂಲಕ ಕೊರೊನಾ ವೈರಾಣುವಿನ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಕ್ರೀಡಾ ತಾರೆಗಳು ಬೆಂಬಲ ಸೂಚಿಸಿದರು.
ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಒಲಿಂಪಿಯನ್ ಬಾಕ್ಸರ್ ಎಂ.ಸಿ.ಮೇರಿ ಕೋಮ್, ಸ್ಪ್ರಿಂಟರ್ ಹಿಮಾ ದಾಸ್, ಒಲಿಂಪಿಯನ್ ಕುಸ್ತಿಪಟು ಸಾಕ್ಷಿ ಮಲಿಕ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್, ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್, ಸುರೇಶ್ ರೈನಾ ಸೇರಿದಂತೆ ಅನೇಕರು ಹಣತೆ, ಮೋಂಬತ್ತಿ ಹಾಗೂ ಮೊಬೈಲ್ ಫ್ಲ್ಯಾಷ್ಲೈಟ್ಗಳನ್ನು ಬೆಳಗಿದರು. ಈ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.