ಲಂಡನ್: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗಾಯದ ಸಮಸ್ಯೆಗೆ ಸಿಲುಕಿರುವ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ಹಾಗೂ ಅನುಭವಿ ಆಟಗಾರರನ್ನು ಒಳಗೊಂಡ ರೋಹಿತ್ ಶರ್ಮ ಬಳಗ ಟಿ20 ಸರಣಿಯನ್ನು 2–1 ರಲ್ಲಿ ಗೆದ್ದಿತ್ತು. ಆದೇ ರೀತಿ ಈ ಸರಣಿಯನ್ನೂ ಗೆಲ್ಲುವ ಉಮೇದಿನಲ್ಲಿದೆ.
ಟಿ20 ವಿಶ್ವಕಪ್ಗೆ ಮುನ್ನ ಭಾರತ ಆಡಲಿರುವ ಕೊನೆಯ ಏಕದಿನ ಸರಣಿ ಇದಾಗಿದೆ. ‘ಮೂರು ಪಂದ್ಯಗಳ ಸರಣಿ ನಮಗೆ ಮಹತ್ವದ್ದಾಗಿದೆ’ ಎಂದು ನಾಯಕ ರೋಹಿತ್ ಶರ್ಮ ಹೇಳಿದ್ದಾರೆ.
3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಕೆನ್ನಿಂಗ್ಟನ್ನ ಓವಲ್ನಲ್ಲಿ ನಡೆಯುತ್ತಿದೆ.
ಭಾರತ ತಂಡ: ರೋಹಿತ್ ಶರ್ಮಾ, ಶಿಖರ್ ದವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮದ್ ಶಮಿ, ಜಸ್ಪ್ರಿತ್ ಬೂಮ್ರಾ, ಯುಜುವೇಂದ್ರ ಚಹಾಲ್, ಪ್ರಸಿದ್ಧ ಕೃಷ್ಣ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.