ADVERTISEMENT

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಮನೀಷ್ ಸಾರಥ್ಯ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 16:50 IST
Last Updated 26 ನವೆಂಬರ್ 2021, 16:50 IST
ಕರ್ನಾಟಕದ ಬೌಲಿಂಗ್ ಕೋಚ್ ಎಸ್. ಅರವಿಂದ್, ಮುಖ್ಯ ಕೋಚ್ ಯರೇಗೌಡ ಮತ್ತು ನಾಯಕ ಮನೀಷ್ ಪಾಂಡೆ
ಕರ್ನಾಟಕದ ಬೌಲಿಂಗ್ ಕೋಚ್ ಎಸ್. ಅರವಿಂದ್, ಮುಖ್ಯ ಕೋಚ್ ಯರೇಗೌಡ ಮತ್ತು ನಾಯಕ ಮನೀಷ್ ಪಾಂಡೆ   

ಬೆಂಗಳೂರು: ಮುಂದಿನ ತಿಂಗಳು ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಮನೀಷ್ ಪಾಂಡೆ ಮುನ್ನಡೆಸಲಿದ್ದಾರೆ.

ಕರ್ನಾಟಕ ತಂಡವು ಬಿ ಗುಂಪಿನಲ್ಲಿ ಆಡಲಿದೆ. ಇದರಲ್ಲಿ ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬಂಗಾಳ ತಂಡಗಳ ಸವಾಲನ್ನು ಎದುರಿಸಲಿದೆ. ಈಚೆಗೆ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪಾಂಡೆ ಬಳಗವು ರನ್ನರ್ಸ್ ಅಪ್ ಆಗಿತ್ತು.

ಬಿ ಗುಂಪಿನ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿವೆ. ಕರ್ನಾಟಕವು ಡಿಸೆಂಬರ್ 8ರಂದು ಪುದುಚೇರಿ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ADVERTISEMENT

ತಂಡ ಇಂತಿದೆ: ಮನೀಷ್ ಪಾಂಡೆ (ನಾಯಕ), ರೋಹನ್ ಕದಂ, ಆರ್. ಸಮರ್ಥ್ (ಉಪನಾಯಕ), ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್ (ವಿಕೆಟ್‌ಕೀಪರ್), ಶರತ್ ಶ್ರೀನಿವಾಸ್ (ವಿಕೆಟ್‌ಕೀಪರ್), ಜೆ. ಸುಚಿತ್, ಶ್ರೇಯಸ್ ಗೋಪಾಲ್, ಕೆ.ಸಿ. ಕಾರ್ಯಪ್ಪ, ರಿತೇಶ್ ಭಟ್ಕಳ್, ಪವನ್ ದುಬೆ, ವಿದ್ಯಾಧರ್ ಪಾಟೀಲ, ವಿ. ಕೌಶಿಕ್, ಪ್ರತೀಕ್ ಜೈನ್, ಎಂ. ಬಿ. ದರ್ಶನ್, ವಿಜಯಕುಮಾರ್ ವೈಶಾಖ, ಎಂ. ವೆಂಕಟೇಶ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.