ನವದೆಹಲಿ: ನವೆಂಬರ್ ಮೂರರಿಂದ ಬಾಂಗ್ಲಾದೇಶ ತಂಡದ ಎದುರು ನಡೆಯಲಿರುವ ಟ್ವೆಂಟಿ–20 ಕ್ರಿಕೆಟ್ ಸರಣಿಯಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಈ ಸರಣಿಯಲ್ಲಿ ಆಡುವ ಭಾರತ ತಂಡದ ಆಟಗಾರರನ್ನು ಇದೇ 24ರಂದು ಮುಂಬೈನಲ್ಲಿ ಆಯ್ಕೆ ಮಾಡಲಾಗುವುದು. ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ದೆಹಲಿ, ರಾಜ್ಕೋಟ್ ಮತ್ತು ನಾಗಪುರದಲ್ಲಿ ಆಯೋಜನೆಗೊಳ್ಳಲಿವೆ. ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯು ನ.14ರಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ಇಂದೋರ್ ಮತ್ತು ಎರಡನೇ ಟೆಸ್ಟ್ ಕೋಲ್ಕತ್ತ (ನ.22)ದಲ್ಲಿ ನಡೆಯಲಿದೆ.
ಡಿಸೆಂಬರ್ನಲ್ಲಿ ವೆಸ್ಟ್ ಇಂಡೀಸ್ ತಂಡವು ಭಾರತಕ್ಕೆ ಆಗಮಿಸಲಿದೆ. ಮೂರು ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.